ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸ ಬೆಳಕಿನ ಹಬ್ಬ, ನಮ್ಮೆಲ್ಲರಲ್ಲೂ ಇರುವ ಅಜ್ಞಾನವೆಂಬ ಅಂಧಕಾರವನ್ನು ತೊಡದುಹಾಕಿ, ಸುಜ್ಞಾನವೆಂಬ ಬೆಳಕನ್ನು ಹಚ್ಚುವ ಮಾಸ ಕಾರ್ತೀಕ. ಈ ಮಾಸದಲ್ಲಿ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಲಕ್ಷ ದೀಪೋತ್ಸವ ಮತ್ತು ಉತ್ಸವಗಳು ನಡೆಯುತ್ತವೆ. ಧಾರ್ಮಿಕ ವಿಚಾರಗಳ ವಿನಿಮಯ ಆಗುತ್ತದೆ. ಸಹಬಾಳ್ವೆಯ ಮಹತ್ವ ಸಾರುತ್ತವೆ ಎಂದು ಹೇಳಿದರು.
ಮಲೆ ಮಹದೇಶ್ವರ ಸ್ವಾಮಿಯವರು ಜನಪದರ ದೇವರು, ಅವರು ಹುಲಿಯ ಮೇಲೆ ಸಂಚಾರ ಮಾಡುತ್ತಿದ್ದರು. ಆದರೆ ಅವರ ಮನಸ್ಸು ಮಲ್ಲಿಗೆಯಷ್ಟೇ ಮೃದುವಾಗಿತ್ತು. ಹೀಗಾಗಿಯೇ ಅವರು ಮಲ್ಲಿಗೆ ಮಾದಪ್ಪನಾಗಿ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.
15ನೇ ಶತಮಾನದಲ್ಲಿ ಜನರ ಸಂಕಷ್ಟಗಳನ್ನು ತಮ್ಮ ಅಲೌಕಿಕಶಕ್ತಿಯಿಂದ ಪರಿಹರಿಸಲು ಅವತರಿಸಿದ ದೈವಾಂಶ ಸಂಭೂತರಾದ ಮಹದೇಶ್ವರಸ್ವಾಮಿಯವರು ಬೆಟ್ಟದ ಸರಣಿಯ ರಮಣೀಯತೆಗೆ ಮನಸೋತು ಮಹದೇಶ್ವರ ಬೆಟ್ಟದಲ್ಲಿಯೇ ನೆಲೆಸಿದರು. ಸುದೀರ್ಘ ತಪಸ್ಸು ಮಾಡಿ ಸಿದ್ಧಿಯನ್ನು ಪಡೆದರು.
ಇಂದಿಗೂ ತಮ್ಮ ತಪಃಶಕ್ತಿಯನ್ನು ಜನರ ಕಲ್ಯಾಣ ಮಾಡುತ್ತಿದ್ದಾರೆ. ತಮ್ಮ ಅಲೌಕಿಕ ಶಕ್ತಿಯನ್ನು ಸಮಾಜದ ಅದರಲ್ಲೂ ದೀನ ದಲಿತರ, ಶೋಷಿತರನ್ನು ಹರಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…