ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.
ಇಂದು(ಜೂ.20) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ, “ಪೌರಕಾರ್ಮಿಕರಿಗೆ ಕಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮ” ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯವೇ ಕಟ್ಟ ಕಡೆಯ ಮನುಷ್ಯನಿಗೆ ಮೊಟ್ಟಮೊದಲ ಆದ್ಯತೆ ನೀಡುವುದೇ ಆಗಿದೆ. ನಮ್ಮ ಸರ್ಕಾರ ಪೌರಕಾರ್ಮಿಕರ ಪರವಾಗಿದ್ದು ನಿಮಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುತ್ತೇವೆ ಎಂದು ಹೇಳಿದರು.
ನಿಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಎಲ್ಲರೂ ವಿದ್ಯಾಂತರಾಗಬೇಕು. ಸರ್ಕಾರದಿಂದ ಅನೇಕ ಯೋಜನೆಗಳಿವೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮಾತನಾಡಿ, ಮೊಟ್ಟ ಮೊದಲಿಗೆ ಇದು ನಿಮ್ಮ ಕಾರ್ಯಕ್ರಮ. ನಿಮ್ಮ ಪ್ರಯತ್ನಕ್ಕೆ ಜಯ ಸಿಕ್ಕಿರುವುದಕ್ಕೆ ಅಭಿನಂದನೆಗಳು. ಇಡೀ ರಾಷ್ಟ್ರದಲ್ಲಿ ಲಕ್ಷಾಂತರ ಪೌರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟು ನಡೆದುಕೊಂಡಿದ್ದರಿಂದ ನಿಮ್ಮ ಕನಸು ನನಸಾಗಿದೆ ಎಂದು ಹೇಳಿದರು.
ಮಾಜಿ ಮೇಯರ್ ನಾರಾಯಣ್ ಮಾತನಾಡಿ, ದೇಶದ ಯಾವುದೇ ರಾಜ್ಯದಲ್ಲಿಯೂ ಖಾಯಂಗೊಳಿಸುವಿಕೆ ಆಗಿಲ್ಲ. ಎಷ್ಟೋ ಕಡೆಗಳಲ್ಲಿ ಗುತ್ತಿಗೆ ಪದ್ದತಿಯನ್ನೇ ರದ್ದುಪಡಿಸಲಾಯಿತು. ಈಗಿನ ಸರ್ಕಾರ ಪೌರಕಾರ್ಮಿಕರನ್ನು ಖಾಯಂ ಮಾಡಿದೆ. ಎಲ್ಲಾ ಪೌರ ಕಾರ್ಮಿಕರು ಇದನ್ನು ಸದುಪಯೋಗಪಡಿಸಿಕೊಂಡು ನಿಮ್ಮ ಮಕ್ಕಳಿಗೂ ಭವಿಷ್ಯವನ್ನು ರೂಪಿಸುವಂತೆ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಡಿ.ಎಸ್.ರಮೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ, ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…