ಮೈಸೂರು

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಮಧ್ಯಾಹ್ನದಿಂದ ಸಂಜೆ ತನಕ ನೂರಾರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಕೇಳಿದರು. ಎಚ್.ಡಿ.ಕೋಟೆ ತಾಲ್ಲೂಕಿನ ಬೇಲದಕುಪ್ಪೆ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಆಗಮಿಸಿ ಜಾತ್ರೆಗೆ ಆಗಮಿಸುವಂತೆ ಮನವಿ ಸಲ್ಲಿಸುವ ಜತೆಗೆ, ಹಲವಾರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಕಂಚುಮಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ 50 ಲಕ್ಷ ರೂಪಾಯಿ ನೀಡಿದ್ದು,ಕಾಮಗಾರಿ ಪೂರ್ಣವಾಗಿಲ್ಲ. ಹಾಗಾಗಿ,ಹೆಚ್ಚುವರಿ ಅನುದಾನ ನೀಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಸಚಿವರು ಮುಂದಿನ ದಿನಗಳಲ್ಲಿ ಭವನ ನಿರ್ಮಾಣಕ್ಕೆ ಆಗುವ ಅಂದಾಜು ಪಟ್ಟಿಯನ್ನು ತಯಾರಿಸಿ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಎಚ್.ಡಿ.ಕೋಟೆಯ ಜೀತ ವಿಮುಕ್ತ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಸಚಿವರಿಗೆ ಕಾರ್ಮಿಕರ ಸಮಸ್ಯೆಗಳನ್ನು ವಿವರಿಸಿದರು. ತಾಲ್ಲೂಕಿನಲ್ಲಿರುವ ಕಾರ್ಮಿಕರು, ಸರ್ಕಾರದಿಂದ ಸಿಗಬೇಕಾದ ಸೌಲಭ್ಯ, ಜಮೀನು ಮಂಜೂರಾತಿಯಲ್ಲಿ ವಿಳಂಬ ಸೇರಿದಂತೆ ಮತ್ತಿತರ ಅಂಶಗಳನ್ನು ಹೇಳಿದರು.

ಇದನ್ನು ಪರಿಗಣಿಸಿದ ಡಾ.ಮಹದೇವಪ್ಪ,ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ನಂಜನಗೂಡು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶರಾಜು ನೇತೃತ್ವದ ತಂಡ ಆಗಮಿಸಿ ಸಚಿವರೊಂದಿಗೆ ನಾನಾ ವಿಚಾರಗಳನ್ನು ಚರ್ಚಿಸಿದರಲ್ಲದೆ, ಖಾಸಗಿ ಟ್ರಸ್ಟ್‌ಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ಧಾರ್ಥ ಅವರು ಸೋಸಲೆ ಭಾಗಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಿಕ್ಕಬಳ್ಳಾಪುರ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರೊಬ್ಬರು ಪೋಷಕರ ಅನಾರೋಗ್ಯದ ಕಾರಣಕ್ಕಾಗಿ ಮೈಸೂರು ಜಿಲ್ಲೆಗೆ ವರ್ಗಾಯಿಸುವಂತೆ ಮನವಿ ಮಾಡಿದರು. ಈ ಬಗ್ಗೆ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ಎಂಡಿ ಜತೆಗೆ ಚರ್ಚಿಸಿದ ಸಚಿವರು,ಮಾನವೀಯತೆ ಆಧಾರದ ಮೇಲೆ ನೌಕರನ ಅರ್ಜಿಯನ್ನು ಪರಿಗಣಿಸಿ ವರ್ಗಾಯಿಸುವಂತೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

18 mins ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

10 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

10 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

10 hours ago