ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.
ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿದ ಸಚಿವರು ಅವರ ಬೇಡಿಕೆಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.
ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬೌದ್ಧ ಮಂದಿರವನ್ನು ನಮ್ಮ ಆಪ್ತ ಸಿಬ್ಬಂದಿ ವರ್ಗದೊಡನೆ ವೀಕ್ಷಣೆ ಮಾಡಿದರು.
ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಬಗ್ಗೆ ಅಲ್ಲಿನ ಜನರಿಗೆ ಇರುವ ಸ್ಪಷ್ಟತೆ ಮತ್ತು ಕಾಳಜಿಯನ್ನು ಕಂಡು ಸಂತಸ ವ್ಯಕ್ತಪಡಿಸಿದ ಸಚಿವರು ಬುದ್ಧನ ನಾಡು ಕಟ್ಟುವ ಪ್ರಾಮುಖ್ಯತೆಯನ್ನು ಅಲ್ಲಿನ ಬೌದ್ದ ಬಿಕ್ಕುಗಳ ಜೊತೆಗೆ ಚರ್ಚಿಸಿದರು.
ಇದೇ ವೇಳೆ ಟಿಬೆಟಿಯನ್ ವಾಸಿ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಬೇಡಿಕೆಗಳ ಬಗ್ಗೆಯೂ ಸಚಿವರು ಚರ್ಚಿಸಿದರು.
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…