ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.
ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿದ ಸಚಿವರು ಅವರ ಬೇಡಿಕೆಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.
ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬೌದ್ಧ ಮಂದಿರವನ್ನು ನಮ್ಮ ಆಪ್ತ ಸಿಬ್ಬಂದಿ ವರ್ಗದೊಡನೆ ವೀಕ್ಷಣೆ ಮಾಡಿದರು.
ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಬಗ್ಗೆ ಅಲ್ಲಿನ ಜನರಿಗೆ ಇರುವ ಸ್ಪಷ್ಟತೆ ಮತ್ತು ಕಾಳಜಿಯನ್ನು ಕಂಡು ಸಂತಸ ವ್ಯಕ್ತಪಡಿಸಿದ ಸಚಿವರು ಬುದ್ಧನ ನಾಡು ಕಟ್ಟುವ ಪ್ರಾಮುಖ್ಯತೆಯನ್ನು ಅಲ್ಲಿನ ಬೌದ್ದ ಬಿಕ್ಕುಗಳ ಜೊತೆಗೆ ಚರ್ಚಿಸಿದರು.
ಇದೇ ವೇಳೆ ಟಿಬೆಟಿಯನ್ ವಾಸಿ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಬೇಡಿಕೆಗಳ ಬಗ್ಗೆಯೂ ಸಚಿವರು ಚರ್ಚಿಸಿದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…