ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.
ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿದ ಸಚಿವರು ಅವರ ಬೇಡಿಕೆಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.
ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬೌದ್ಧ ಮಂದಿರವನ್ನು ನಮ್ಮ ಆಪ್ತ ಸಿಬ್ಬಂದಿ ವರ್ಗದೊಡನೆ ವೀಕ್ಷಣೆ ಮಾಡಿದರು.
ಭಾರತದ ಮೂಲ ಧರ್ಮವಾದ ಬೌದ್ಧ ಧರ್ಮದ ಬಗ್ಗೆ ಅಲ್ಲಿನ ಜನರಿಗೆ ಇರುವ ಸ್ಪಷ್ಟತೆ ಮತ್ತು ಕಾಳಜಿಯನ್ನು ಕಂಡು ಸಂತಸ ವ್ಯಕ್ತಪಡಿಸಿದ ಸಚಿವರು ಬುದ್ಧನ ನಾಡು ಕಟ್ಟುವ ಪ್ರಾಮುಖ್ಯತೆಯನ್ನು ಅಲ್ಲಿನ ಬೌದ್ದ ಬಿಕ್ಕುಗಳ ಜೊತೆಗೆ ಚರ್ಚಿಸಿದರು.
ಇದೇ ವೇಳೆ ಟಿಬೆಟಿಯನ್ ವಾಸಿ ಪ್ರದೇಶಕ್ಕೆ ಸಂಬಂಧಿಸಿದ ಕೆಲವು ಬೇಡಿಕೆಗಳ ಬಗ್ಗೆಯೂ ಸಚಿವರು ಚರ್ಚಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…