9-10 Hour Workday for Labourers | Will Not Accept Centre’s Proposal
ಮೈಸೂರು : ಚೀನಾ ವಸ್ತುಗಳನ್ನು ಬಾಯ್ಕಾಟ್ ಮಾಡ್ತೀವಿ ಅನ್ನೋರು ಇದೀಗ ಚೀನಾಕ್ಕೆ ಹೋಗಿ ಶೇಕ್ ಹ್ಯಾಂಡ್ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಸಚಿವ ಸಂತೋಷ್ ಲಾಡ್ ಟೀಕಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗರಾರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ, ಮುಸಲ್ಮಾನರ ವಿಚಾರ ಮಾತನಾಡುವವರು ಬಿಜೆಪಿ ನಾಯಕರು. ಆಪರೇಷನ್ ಸಿಂಧೂರ್ ಬಗ್ಗೆ ಮಾತನಾಡುವವರು ಪಾಕಿಸ್ತಾನದ ಜತೆ ಈಗ ಕ್ರಿಕೆಟ್ ಪಂದ್ಯ ಆಡುತ್ತಿದ್ದಾರೆ. ಪಾಕಿಸ್ತಾನಕ್ಕೆ ನೀರು ಕೊಡಲ್ಲ ಅಂತಾರೆ. ಚೀನಾ ವಸ್ತುಗಳನ್ನು ಬಾಯ್ಕಾಟ್ ಮಾಡ್ತೀವಿ ಅಂತಾರೆ. ಈಗ ಚೀನಾಕ್ಕೆ ಹೋಗಿ ಶೇಕ್ ಹ್ಯಾಂಡ್ ಮಾಡುತ್ತಾರೆ. ಭಾರತ-ಪಾಕಿಸ್ತಾನ ಯುದ್ಧದ ವೇಳೆ ಪಾಕ್ಗೆ ಚೀನಾ ಸಹಾಯ ಮಾಡಿತು ಎಂದು ಪ್ರಧಾನಿ ಮೋದಿ ನಡೆಯನ್ನು ಖಂಡಿಸಿದರು.
ದಸರಾ ಉದ್ಘಾಟಕರ ಪರ-ವಿರೋಧದ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಬಾನು ಮುಷ್ತಾಕ್ ಅವರನ್ನು ದಸರಾಕ್ಕೆ ಕರೆಯಬಾರದು ಎಂದು ಸಂವಿಧಾನದಲ್ಲಿ ಇಲ್ಲ. ಬಿಜೆಪಿಯವರು ರಾಮಮಂದಿರ ಪ್ರಾಂರಂಭೋತ್ಸವ ಮಾಡಿದಾಗ ಪೂಜೆ ಮಾಡಿದ್ದು ಯಾರು?ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲವಾ, ಬ್ರಾಹ್ಮಣ ವ್ಯವಸ್ಥೆ ಬಿಟ್ಟು ನಾವೇ ಪೂಜೆ ಮಾಡಲು ಆಗುತ್ತದೆಯೇ? ನಾನು ಕೂಡ ಹಿಂದು. ನಮ್ಮ ಮನೆಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದಲ್ಲೂ ಪೂಜೆ ಮಾಡುವವರು ಯಾರು? ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
“ಗಾಂಧೀಜಿ ಕೊಂದಿದ್ದು ಆರ್ಎಸ್ಎಸ್ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಸುಳ್ಳು ಹೇಳುವುದಿಲ್ಲ. ಗಾಂಧೀಜಿ ಕೊಂದಿದ್ದು ಯಾರು ಅಂತ ಇಡೀ ಜಗತ್ತಿಗೆ ಗೊತ್ತಿದೆ ಎಂದು ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಬಿಜೆಪಿ-ಜಾ.ದಳದ ನಾಯಕರಿಂದ ಧರ್ಮಸ್ಥಳ ಚಲೋ ವಿಚಾರವಾಗಿ ಮಾತನಾಡಿ, ಎಸ್ಐಟಿ ತನಿಖೆ ವೇಳೆ ಮೃತ ದೇಹಗಳು ಸಿಗದಿದ್ದಕ್ಕೆ ರಾಜಕೀಯ ಲಾಭ ಪಡೆಯಲು ಬಿಜೆಪಿಯವರು ಮುಂದಾಗಿದ್ದಾರೆ. ಧರ್ಮಸ್ಥಳದ ಮೇಲೆ ಒಂದು ಕಳಂಕ ಇತ್ತು. ಕೆಲವರು ಧರ್ಮಸ್ಥಳದ ಮೇಲೆ ಆರೋಪ ಮಾಡುತ್ತಿದ್ದರು. ಎಸ್ಐಟಿ ತನಿಖೆ ಮೂಲಕ ಧರ್ಮಸ್ಥಳದ ಪ್ರಕರಣದ ಸತ್ಯಾಂಶವನ್ನು ರಾಜ್ಯಕ್ಕೆ ತಿಳಿಸಲಾಗುತ್ತಿದೆ ಎಂದರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…