ಮೈಸೂರು

25 ಸಾವಿರ ಜಂಬೂ ಸವಾರಿ ಪಾಸ್‌ನಲ್ಲಿ 10 ಸಾವಿರ ಸಚಿವ ಸೋಮಶೇಖರ್‌ ಪಾಲು

ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್‌ ವಿಚಾರದಲ್ಲಿ ದೊಡ್ಡ ಗೋಲ್‌ಮಾಲ್‌ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್‌ ಪಾಸ್‌ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ ವೀಕ್ಷಣೆಯ ಪಾಸ್‌ ವಿತರಣೆಯಲ್ಲಿ ಅಕ್ರಮ ನಡೆಸಿರುವ ಆರೋಪ ಎದುರಾಗಿದೆ.

 

ವಿಜಯ ದಶಮಿ ದಿನದಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯನ್ನು ಅರಮನೆ ಅಂಗಳದಲ್ಲಿ ಕುಳಿತು ವೀಕ್ಷಿಸಲು ಪ್ರತಿ ವರ್ಷವೂ ಪಾಸ್‌ ವ್ಯವಸ್ಥೆ ಮಾಡಲಾಗುತ್ತದೆ. ಸುಮಾರು 25ಸಾವಿರ ಪಾಸ್‌ ನೀಡಲಾಗುತ್ತದೆ. ಈ ಬಾರಿಯೂ 25ಸಾವಿರ ಪಾಸ್‌ ಮುದ್ರಿಸಲಾಗಿದ್ದು, ಅದರ ಪೈಕಿ 10ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್‌.ಟಿ. ಸೋಮಶೇಖರ್‌ ಅವರಿಗಾಗಿ ಮೀಸಲಿಡಲಾಗಿದೆ ಎಂದು ಆರೋಪಿಸಲಾಗಿದೆ.

10ಸಾವಿರ ಪಾಸ್‌ಗಳನ್ನು ತಾನೇ ತೆಗೆದಿಟ್ಟಿರುವ ಸಚಿವರು, ಅದನ್ನು ಬಳಸಿ ತಾವು ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದ ಮತದಾರರಿಗೆ ದಸರಾ ತೋರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಉಳಿದ ಶಾಸಕರು ತಮಗೆ ಪಾಸ್‌ ಸಿಗುತ್ತಿಲ್ಲ ಎಂದು ಸಿಟ್ಟಿಗೆದ್ದಿದ್ದಾರೆ .ಅದರಲ್ಲೂ ಮುಖ್ಯವಾಗಿ ಬಿಜೆಪಿ ಶಾಸಕರೇ ಸಿಟ್ಟಿಗೆದ್ದಿದ್ದಾರೆ ಎಂದು ಹೇಳಲಾಗಿದೆ.

ಸಚಿವರ ಕಡೆಯಿಂದ ಬಿಜೆಪಿ ಶಾಸಕರಿಗೆ ತಲಾ 100 ಪಾಸ್ ಕಳುಹಿಸಿಕೊಡಲಾಗಿತ್ತು ಆದರೆ, ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಅವರಿಗೆ 50 ಪಾಸ್ ಮಾತ್ರ ನೀಡಲಾಗಿದೆ. ಇದನ್ನು ಗಮನಿಸಿದ ಎಚ್‌. ವಿಶ್ವನಾಥ್‌ ಅವರು ಪಾಸ್‌ಗಳನ್ನು, ಅದನ್ನು ಕೊಡಲು ಬಂದ ಸಿಬ್ಬಂದಿಯ ಮೇಲೇ ಎಸದಿದ್ದಾರೆ. ಭಾರಿ ಗಲಾಟೆ ಮಾಡಿದ ಬಳಿಕ ಬಿಜೆಪಿ ಶಾಸಕರಿಗೆ ತಲಾ 500 ಪಾಸ್‌ಗಳನ್ನು ಕೊಡಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ತಲಾ 100 ಪಾಸ್ ಹಂಚಿಕೆ ಮಾಡಲಾಗಿದೆ.

ಜಂಬೂ ಸವಾರಿ ಮತ್ತು ಪಂಜಿನ ಕವಾಯತು ನೋಡಲು ಪಾಸ್‌ಗೆ ಭಾರಿ ಡಿಮ್ಯಾಂಡ್‌ ಇರುತ್ತದೆ. ಸಾರ್ವಜನಿಕರು ಮಾತ್ರವಲ್ಲ ಗಣ್ಯರ ಕಡೆಯಿಂದಲೂ ಭಾರಿ ಬೇಡಿಕೆ ಇರುತ್ತದೆ. ಆದರೆ, ಒಬ್ಬೊಬ್ಬ ರಾಜಕಾರಣಿಗಳು ಇಷ್ಟೊಂದು ಪಾಸ್‌ಗಳನ್ನು ಎತ್ತಿಟ್ಟುಕೊಂಡರೆ ಹೆಚ್ಚಿನವರಿಗೆ ಅನ್ಯಾಯವಾಗುತ್ತದೆ ಎನ್ನುವುದು ಆರೋಪ. ಜನರ ದಸರಾ ಆಗಬೇಕಾದ ದಸರಾ ಮಹೋತ್ಸವ ರಾಜಕಾರಣಿಗಳ ಹಬ್ಬವಾಗುತ್ತದೆ.

ಗೋಲ್ಡ್‌ ಪಾಸ್‌ ವಿವಾದ ಏನು?
ಇದಕ್ಕಿಂತ ಮೊದಲು ಗೋಲ್ಡ್‌ ಪಾಸ್‌ ವಿಚಾರಕ್ಕೆ ವಿವಾದ ಉಂಟಾಗಿತ್ತು. ಮೈಸೂರು ದಸರಾದ ಸರ್ವಾಂಗ ಸೌಂದರ್ಯವನ್ನು ಸವಿಯಲು ಅವಕಾಶವಾಗುವಂತೆ, ಪ್ರೇಕ್ಷಣೀಯ ಸ್ಥಳಗಳಿಗೂ ಪ್ರವೇಶ ದೊರೆಯುವಂತೆ 4999 ರೂ. ಮೌಲ್ಯದ ಗೋಲ್ಡ್‌ ಪಾಸ್‌ ಸಿದ್ಧಪಡಿಸಲಾಗಿದೆ. ಒಟ್ಟು 1000 ಪಾಸ್‌ಗಳನ್ನು ಮಾಡಿ ಅದರಲ್ಲಿ 500ನ್ನು ಆನ್‌ಲೈನ್‌ ಮೂಲಕ, 500 ನ್ನು ಆಫ್‌ ಲೈನ್‌ ಮೂಲಕ ಬಿಡುಗಡೆ ಮಾಡಲಾಗಿತ್ತುದೆನ್ನಲಾಗಿದೆ

andolana

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

1 hour ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

1 hour ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

2 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

2 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

2 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

3 hours ago