ಮೈಸೂರು

25 ಸಾವಿರ ಜಂಬೂ ಸವಾರಿ ಪಾಸ್‌ನಲ್ಲಿ 10 ಸಾವಿರ ಸಚಿವ ಸೋಮಶೇಖರ್‌ ಪಾಲು

ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್‌ ವಿಚಾರದಲ್ಲಿ ದೊಡ್ಡ ಗೋಲ್‌ಮಾಲ್‌ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್‌ ಪಾಸ್‌ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ ವೀಕ್ಷಣೆಯ ಪಾಸ್‌ ವಿತರಣೆಯಲ್ಲಿ ಅಕ್ರಮ ನಡೆಸಿರುವ ಆರೋಪ ಎದುರಾಗಿದೆ.

 

ವಿಜಯ ದಶಮಿ ದಿನದಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯನ್ನು ಅರಮನೆ ಅಂಗಳದಲ್ಲಿ ಕುಳಿತು ವೀಕ್ಷಿಸಲು ಪ್ರತಿ ವರ್ಷವೂ ಪಾಸ್‌ ವ್ಯವಸ್ಥೆ ಮಾಡಲಾಗುತ್ತದೆ. ಸುಮಾರು 25ಸಾವಿರ ಪಾಸ್‌ ನೀಡಲಾಗುತ್ತದೆ. ಈ ಬಾರಿಯೂ 25ಸಾವಿರ ಪಾಸ್‌ ಮುದ್ರಿಸಲಾಗಿದ್ದು, ಅದರ ಪೈಕಿ 10ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್‌.ಟಿ. ಸೋಮಶೇಖರ್‌ ಅವರಿಗಾಗಿ ಮೀಸಲಿಡಲಾಗಿದೆ ಎಂದು ಆರೋಪಿಸಲಾಗಿದೆ.

10ಸಾವಿರ ಪಾಸ್‌ಗಳನ್ನು ತಾನೇ ತೆಗೆದಿಟ್ಟಿರುವ ಸಚಿವರು, ಅದನ್ನು ಬಳಸಿ ತಾವು ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದ ಮತದಾರರಿಗೆ ದಸರಾ ತೋರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಉಳಿದ ಶಾಸಕರು ತಮಗೆ ಪಾಸ್‌ ಸಿಗುತ್ತಿಲ್ಲ ಎಂದು ಸಿಟ್ಟಿಗೆದ್ದಿದ್ದಾರೆ .ಅದರಲ್ಲೂ ಮುಖ್ಯವಾಗಿ ಬಿಜೆಪಿ ಶಾಸಕರೇ ಸಿಟ್ಟಿಗೆದ್ದಿದ್ದಾರೆ ಎಂದು ಹೇಳಲಾಗಿದೆ.

ಸಚಿವರ ಕಡೆಯಿಂದ ಬಿಜೆಪಿ ಶಾಸಕರಿಗೆ ತಲಾ 100 ಪಾಸ್ ಕಳುಹಿಸಿಕೊಡಲಾಗಿತ್ತು ಆದರೆ, ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಅವರಿಗೆ 50 ಪಾಸ್ ಮಾತ್ರ ನೀಡಲಾಗಿದೆ. ಇದನ್ನು ಗಮನಿಸಿದ ಎಚ್‌. ವಿಶ್ವನಾಥ್‌ ಅವರು ಪಾಸ್‌ಗಳನ್ನು, ಅದನ್ನು ಕೊಡಲು ಬಂದ ಸಿಬ್ಬಂದಿಯ ಮೇಲೇ ಎಸದಿದ್ದಾರೆ. ಭಾರಿ ಗಲಾಟೆ ಮಾಡಿದ ಬಳಿಕ ಬಿಜೆಪಿ ಶಾಸಕರಿಗೆ ತಲಾ 500 ಪಾಸ್‌ಗಳನ್ನು ಕೊಡಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ತಲಾ 100 ಪಾಸ್ ಹಂಚಿಕೆ ಮಾಡಲಾಗಿದೆ.

ಜಂಬೂ ಸವಾರಿ ಮತ್ತು ಪಂಜಿನ ಕವಾಯತು ನೋಡಲು ಪಾಸ್‌ಗೆ ಭಾರಿ ಡಿಮ್ಯಾಂಡ್‌ ಇರುತ್ತದೆ. ಸಾರ್ವಜನಿಕರು ಮಾತ್ರವಲ್ಲ ಗಣ್ಯರ ಕಡೆಯಿಂದಲೂ ಭಾರಿ ಬೇಡಿಕೆ ಇರುತ್ತದೆ. ಆದರೆ, ಒಬ್ಬೊಬ್ಬ ರಾಜಕಾರಣಿಗಳು ಇಷ್ಟೊಂದು ಪಾಸ್‌ಗಳನ್ನು ಎತ್ತಿಟ್ಟುಕೊಂಡರೆ ಹೆಚ್ಚಿನವರಿಗೆ ಅನ್ಯಾಯವಾಗುತ್ತದೆ ಎನ್ನುವುದು ಆರೋಪ. ಜನರ ದಸರಾ ಆಗಬೇಕಾದ ದಸರಾ ಮಹೋತ್ಸವ ರಾಜಕಾರಣಿಗಳ ಹಬ್ಬವಾಗುತ್ತದೆ.

ಗೋಲ್ಡ್‌ ಪಾಸ್‌ ವಿವಾದ ಏನು?
ಇದಕ್ಕಿಂತ ಮೊದಲು ಗೋಲ್ಡ್‌ ಪಾಸ್‌ ವಿಚಾರಕ್ಕೆ ವಿವಾದ ಉಂಟಾಗಿತ್ತು. ಮೈಸೂರು ದಸರಾದ ಸರ್ವಾಂಗ ಸೌಂದರ್ಯವನ್ನು ಸವಿಯಲು ಅವಕಾಶವಾಗುವಂತೆ, ಪ್ರೇಕ್ಷಣೀಯ ಸ್ಥಳಗಳಿಗೂ ಪ್ರವೇಶ ದೊರೆಯುವಂತೆ 4999 ರೂ. ಮೌಲ್ಯದ ಗೋಲ್ಡ್‌ ಪಾಸ್‌ ಸಿದ್ಧಪಡಿಸಲಾಗಿದೆ. ಒಟ್ಟು 1000 ಪಾಸ್‌ಗಳನ್ನು ಮಾಡಿ ಅದರಲ್ಲಿ 500ನ್ನು ಆನ್‌ಲೈನ್‌ ಮೂಲಕ, 500 ನ್ನು ಆಫ್‌ ಲೈನ್‌ ಮೂಲಕ ಬಿಡುಗಡೆ ಮಾಡಲಾಗಿತ್ತುದೆನ್ನಲಾಗಿದೆ

andolana

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago