ಮೈಸೂರು

25 ಸಾವಿರ ಜಂಬೂ ಸವಾರಿ ಪಾಸ್‌ನಲ್ಲಿ 10 ಸಾವಿರ ಸಚಿವ ಸೋಮಶೇಖರ್‌ ಪಾಲು

ಮೈಸೂರು: ದೇಶ-ವಿದೇಶಗಳ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಮೈಸೂರು ದಸರಾ ಜಂಬೂ ಸವಾರಿಯ ಪಾಸ್‌ ವಿಚಾರದಲ್ಲಿ ದೊಡ್ಡ ಗೋಲ್‌ಮಾಲ್‌ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಲವು ದಿನಗಳ ಹಿಂದಷ್ಟೇ ಗೋಲ್ಡ್‌ ಪಾಸ್‌ ವಿಚಾರದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದರೆ ಈಗ ಜಂಬೂಸವಾರಿ ವೀಕ್ಷಣೆಯ ಪಾಸ್‌ ವಿತರಣೆಯಲ್ಲಿ ಅಕ್ರಮ ನಡೆಸಿರುವ ಆರೋಪ ಎದುರಾಗಿದೆ.

 

ವಿಜಯ ದಶಮಿ ದಿನದಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯನ್ನು ಅರಮನೆ ಅಂಗಳದಲ್ಲಿ ಕುಳಿತು ವೀಕ್ಷಿಸಲು ಪ್ರತಿ ವರ್ಷವೂ ಪಾಸ್‌ ವ್ಯವಸ್ಥೆ ಮಾಡಲಾಗುತ್ತದೆ. ಸುಮಾರು 25ಸಾವಿರ ಪಾಸ್‌ ನೀಡಲಾಗುತ್ತದೆ. ಈ ಬಾರಿಯೂ 25ಸಾವಿರ ಪಾಸ್‌ ಮುದ್ರಿಸಲಾಗಿದ್ದು, ಅದರ ಪೈಕಿ 10ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್‌.ಟಿ. ಸೋಮಶೇಖರ್‌ ಅವರಿಗಾಗಿ ಮೀಸಲಿಡಲಾಗಿದೆ ಎಂದು ಆರೋಪಿಸಲಾಗಿದೆ.

10ಸಾವಿರ ಪಾಸ್‌ಗಳನ್ನು ತಾನೇ ತೆಗೆದಿಟ್ಟಿರುವ ಸಚಿವರು, ಅದನ್ನು ಬಳಸಿ ತಾವು ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದ ಮತದಾರರಿಗೆ ದಸರಾ ತೋರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಉಳಿದ ಶಾಸಕರು ತಮಗೆ ಪಾಸ್‌ ಸಿಗುತ್ತಿಲ್ಲ ಎಂದು ಸಿಟ್ಟಿಗೆದ್ದಿದ್ದಾರೆ .ಅದರಲ್ಲೂ ಮುಖ್ಯವಾಗಿ ಬಿಜೆಪಿ ಶಾಸಕರೇ ಸಿಟ್ಟಿಗೆದ್ದಿದ್ದಾರೆ ಎಂದು ಹೇಳಲಾಗಿದೆ.

ಸಚಿವರ ಕಡೆಯಿಂದ ಬಿಜೆಪಿ ಶಾಸಕರಿಗೆ ತಲಾ 100 ಪಾಸ್ ಕಳುಹಿಸಿಕೊಡಲಾಗಿತ್ತು ಆದರೆ, ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್.ವಿಶ್ವನಾಥ್‌ ಅವರಿಗೆ 50 ಪಾಸ್ ಮಾತ್ರ ನೀಡಲಾಗಿದೆ. ಇದನ್ನು ಗಮನಿಸಿದ ಎಚ್‌. ವಿಶ್ವನಾಥ್‌ ಅವರು ಪಾಸ್‌ಗಳನ್ನು, ಅದನ್ನು ಕೊಡಲು ಬಂದ ಸಿಬ್ಬಂದಿಯ ಮೇಲೇ ಎಸದಿದ್ದಾರೆ. ಭಾರಿ ಗಲಾಟೆ ಮಾಡಿದ ಬಳಿಕ ಬಿಜೆಪಿ ಶಾಸಕರಿಗೆ ತಲಾ 500 ಪಾಸ್‌ಗಳನ್ನು ಕೊಡಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ತಲಾ 100 ಪಾಸ್ ಹಂಚಿಕೆ ಮಾಡಲಾಗಿದೆ.

ಜಂಬೂ ಸವಾರಿ ಮತ್ತು ಪಂಜಿನ ಕವಾಯತು ನೋಡಲು ಪಾಸ್‌ಗೆ ಭಾರಿ ಡಿಮ್ಯಾಂಡ್‌ ಇರುತ್ತದೆ. ಸಾರ್ವಜನಿಕರು ಮಾತ್ರವಲ್ಲ ಗಣ್ಯರ ಕಡೆಯಿಂದಲೂ ಭಾರಿ ಬೇಡಿಕೆ ಇರುತ್ತದೆ. ಆದರೆ, ಒಬ್ಬೊಬ್ಬ ರಾಜಕಾರಣಿಗಳು ಇಷ್ಟೊಂದು ಪಾಸ್‌ಗಳನ್ನು ಎತ್ತಿಟ್ಟುಕೊಂಡರೆ ಹೆಚ್ಚಿನವರಿಗೆ ಅನ್ಯಾಯವಾಗುತ್ತದೆ ಎನ್ನುವುದು ಆರೋಪ. ಜನರ ದಸರಾ ಆಗಬೇಕಾದ ದಸರಾ ಮಹೋತ್ಸವ ರಾಜಕಾರಣಿಗಳ ಹಬ್ಬವಾಗುತ್ತದೆ.

ಗೋಲ್ಡ್‌ ಪಾಸ್‌ ವಿವಾದ ಏನು?
ಇದಕ್ಕಿಂತ ಮೊದಲು ಗೋಲ್ಡ್‌ ಪಾಸ್‌ ವಿಚಾರಕ್ಕೆ ವಿವಾದ ಉಂಟಾಗಿತ್ತು. ಮೈಸೂರು ದಸರಾದ ಸರ್ವಾಂಗ ಸೌಂದರ್ಯವನ್ನು ಸವಿಯಲು ಅವಕಾಶವಾಗುವಂತೆ, ಪ್ರೇಕ್ಷಣೀಯ ಸ್ಥಳಗಳಿಗೂ ಪ್ರವೇಶ ದೊರೆಯುವಂತೆ 4999 ರೂ. ಮೌಲ್ಯದ ಗೋಲ್ಡ್‌ ಪಾಸ್‌ ಸಿದ್ಧಪಡಿಸಲಾಗಿದೆ. ಒಟ್ಟು 1000 ಪಾಸ್‌ಗಳನ್ನು ಮಾಡಿ ಅದರಲ್ಲಿ 500ನ್ನು ಆನ್‌ಲೈನ್‌ ಮೂಲಕ, 500 ನ್ನು ಆಫ್‌ ಲೈನ್‌ ಮೂಲಕ ಬಿಡುಗಡೆ ಮಾಡಲಾಗಿತ್ತುದೆನ್ನಲಾಗಿದೆ

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago