ಮೈಸೂರು

ಸಣ್ಣಪುಟ್ಟ ವ್ಯತ್ಯಾಸ ಬದಿಗಿರಿಸಿ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ : ಯದುವೀರ್

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಕಸಿತ ಭಾರತದ ಅಮೃತಕಾಲ ಸೇವೆ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಸಮಾವೇಶವದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತವನ್ನು ನೋಡುವಂತಾಗಿದೆ. ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿ ಕಪ್ತ್ಯ್ಪುಚುಕ್ಕೆ ಹೊಂದಿದ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

ಜನಪರವಾಗಿ ಒಗ್ಗಟ್ಟನ್ನು ಪ್ರದರ್ಶಿಸಿ ಕೆಲಸ ಮಾಡಿದರೆ ಜನರಿಂದ ಬೆಂಬಲ ದೊರೆಯಲಿದೆ. ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಸೇರುವಂತೆ ಮಾಡಿ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಕರ್ನಾಟಕದ ಮಟ್ಟಿಗೆ ನಾವು ಗಟ್ಟಿ ನಿರ್ಧಾರ ಮಾಡುವ ಅಮೃತಗಳಿಗೆ ಬಂದಿದೆ. ಸ್ಥಳೀಯ ಶಾಸಕರು ಬಿಟ್ಟರೆ ಮತ್ತೊಂದು ಶಾಸಕರನ್ನು ಹುಡುಕಲು ಸಾಧ್ಯವಿಲ್ಲ. ನಾಲ್ಕು ಜಿಲ್ಲೆಗಳ ೨೮ ಕ್ಷೇತ್ರದಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲಬೇಕು.ನಮ್ಮಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸ, ಸಮಸ್ಯೆಗಳನ್ನು ಬದಿಗೊತ್ತಿ ಕೆಲಸ ಮಾಡಿದರೆ ಸಾಕು. ಮಧ್ಯಂತರ ಚುನಾವಣೆ ಬಂದರೂ ಅಚ್ಚರಿ ಇಲ್ಲ.ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ ಅಂತಹ ವಾತಾವರಣ ಕಾಣಿಸುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago