ಮೈಸೂರು

ಸಣ್ಣಪುಟ್ಟ ವ್ಯತ್ಯಾಸ ಬದಿಗಿರಿಸಿ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ : ಯದುವೀರ್

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಕಸಿತ ಭಾರತದ ಅಮೃತಕಾಲ ಸೇವೆ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಸಮಾವೇಶವದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತವನ್ನು ನೋಡುವಂತಾಗಿದೆ. ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿ ಕಪ್ತ್ಯ್ಪುಚುಕ್ಕೆ ಹೊಂದಿದ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

ಜನಪರವಾಗಿ ಒಗ್ಗಟ್ಟನ್ನು ಪ್ರದರ್ಶಿಸಿ ಕೆಲಸ ಮಾಡಿದರೆ ಜನರಿಂದ ಬೆಂಬಲ ದೊರೆಯಲಿದೆ. ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಸೇರುವಂತೆ ಮಾಡಿ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಕರ್ನಾಟಕದ ಮಟ್ಟಿಗೆ ನಾವು ಗಟ್ಟಿ ನಿರ್ಧಾರ ಮಾಡುವ ಅಮೃತಗಳಿಗೆ ಬಂದಿದೆ. ಸ್ಥಳೀಯ ಶಾಸಕರು ಬಿಟ್ಟರೆ ಮತ್ತೊಂದು ಶಾಸಕರನ್ನು ಹುಡುಕಲು ಸಾಧ್ಯವಿಲ್ಲ. ನಾಲ್ಕು ಜಿಲ್ಲೆಗಳ ೨೮ ಕ್ಷೇತ್ರದಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲಬೇಕು.ನಮ್ಮಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸ, ಸಮಸ್ಯೆಗಳನ್ನು ಬದಿಗೊತ್ತಿ ಕೆಲಸ ಮಾಡಿದರೆ ಸಾಕು. ಮಧ್ಯಂತರ ಚುನಾವಣೆ ಬಂದರೂ ಅಚ್ಚರಿ ಇಲ್ಲ.ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ ಅಂತಹ ವಾತಾವರಣ ಕಾಣಿಸುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

40 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

7 hours ago