ಮೈಸೂರು

ರಾಗಿ ಬಣವೆಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು

ಎಚ್‌.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ.

ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ ಬಣವೆಗಳನ್ನು ಇಟ್ಟಿದ್ದರು.  ಗುರುವಾರ ಬೆಳಗ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ರೈತ ಕಂಗಾಲಾಗಿದ್ದಾರೆ. ದುರ್ಘಟನೆಯ ಮಾಹಿತಿಯನ್ನು ರೈತ ತಾಲೂಕಿನ ಅಗ್ನಿ ಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕಾಗಿಮಿಸುವಷ್ಟರಲ್ಲಿ ಬಣವೆಗಳು ಸಂಪೂರ್ಣ ಬೆಂಕಿಗಾ ಹುತಿಯಾಗಿದ್ದವು.

ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ದುರ್ಘಟನೆಯನ್ನು ಕಂಡ ಅಕ್ಕ-ಪಕ್ಕದ ಗ್ರಾಮಸ್ಥರ ರೈತರು ಮರುಗಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

3 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago