ಮೈಸೂರು

ರೈತನ ಬೆಳವಣಿಗೆ ಸಹಿಸದೆ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಎಚ್.ಡಿ.ಕೋಟೆ : ರೈತ ಹೊಸ ಮನೆ ಕಟ್ಟಿಕೊಂಡು ಗೃಹಪ್ರವೇಶ ನಡೆಸಿದ ದಿನದಂದೇ ದುಷ್ಕರ್ಮಿಗಳು ಹಳೆಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ೪ ಹಸುಗಳು ಸಾವಿಗೀಡಾಗಿ, ೧೫ ಲಕ್ಷ ರೂ. ಮೌಲ್ಯದ ಪದಾರ್ಥಗಳು ಸುಟ್ಟು ನಾಶವಾಗಿವೆ.

ತಾಲ್ಲೂಕಿನ ಅಡ್ಡಳ್ಳಿ ಗ್ರಾಮದ ರೈತ ದೇವೇಶ ಗ್ರಾಮದಲ್ಲಿ ಹೊಸ ಮನೆ ಕಟ್ಟಿಕೊಂಡು ಶುಕ್ರವಾರ ಗೃಹಪ್ರವೇಶ ನಡೆಸಿದ್ದರು. ಸಮೀಪದಲ್ಲಿ ಇದ್ದ ಹಳೆ ಮನೆಯಿಂದ ಹೊಸ ಮನೆಗೆ ಸ್ಥಳಾಂತರವಾಗಲು ಸಿದ್ಧತೆ ನಡೆಸುತ್ತಿದ್ದರು. ಆದರೆ, ಗುರುವಾರ ರಾತ್ರಿ ೧೨ರ ಸಂದರ್ಭದಲ್ಲಿ ದುಷ್ಕರ್ಮಿಗಳು ದೇವೇಶ ಅವರ ಹಳೇ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದ ಕುಟುಂಬಸ್ಥರು ಹಳೇ ಮನೆಯಲ್ಲಿ ಬೆಂಕಿಯನ್ನು ಕಂಡು, ಆಗಮಿಸಿ ನೋಡಿದಾಗ ಬೆಂಕಿಯ ಕೆನ್ನಾಲಿಗೆಗೆ ಮನೆಯೊಳಗಿದ್ದ ನಾಲ್ಕು ಹಸುಗಳು ಸಿಲುಕಿ ಸಾವಿಗೀಡಾಗಿದ್ದವು. ಅಲ್ಲದೆ, ರೈತರು ಬೆಳೆದಿಟ್ಟಿದ್ದ ಜಿಯಾ ಮುಸುಕಿನ ಜೋಳ, ರಾಗಿ, ಭತ್ತ ಹಾಗೂ ಅನೇಕ ಮರದ ಸಾಮಗ್ರಿಗಳು ನಾಶವಾಗಿವೆ. ಸುಮಾರು ೧೫ ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.

ನಂತರ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಪಶು ವೈದ್ಯ ಇಲಾಖೆಯವರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೈತ ದೇವೇಶ ಅವರ ಬೆಳವಣಿಗೆ ಸಹಿಸಲಾಗದೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಹಸುಗಳು, ದವಸ-ಧಾನ್ಯ, ಮರಗಳು ಎಲ್ಲಾ ನಾಶವಾಗಿವೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಉಂಟಾಗಿದೆ ಎಂದು ರೈತ ಮುಖಂಡ ನಂದಕುಮಾರ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

1 hour ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

2 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

2 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

2 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

3 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

3 hours ago