ಎಚ್.ಡಿ.ಕೋಟೆ : ರೈತ ಹೊಸ ಮನೆ ಕಟ್ಟಿಕೊಂಡು ಗೃಹಪ್ರವೇಶ ನಡೆಸಿದ ದಿನದಂದೇ ದುಷ್ಕರ್ಮಿಗಳು ಹಳೆಯ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ೪ ಹಸುಗಳು ಸಾವಿಗೀಡಾಗಿ, ೧೫ ಲಕ್ಷ ರೂ. ಮೌಲ್ಯದ ಪದಾರ್ಥಗಳು ಸುಟ್ಟು ನಾಶವಾಗಿವೆ.
ತಾಲ್ಲೂಕಿನ ಅಡ್ಡಳ್ಳಿ ಗ್ರಾಮದ ರೈತ ದೇವೇಶ ಗ್ರಾಮದಲ್ಲಿ ಹೊಸ ಮನೆ ಕಟ್ಟಿಕೊಂಡು ಶುಕ್ರವಾರ ಗೃಹಪ್ರವೇಶ ನಡೆಸಿದ್ದರು. ಸಮೀಪದಲ್ಲಿ ಇದ್ದ ಹಳೆ ಮನೆಯಿಂದ ಹೊಸ ಮನೆಗೆ ಸ್ಥಳಾಂತರವಾಗಲು ಸಿದ್ಧತೆ ನಡೆಸುತ್ತಿದ್ದರು. ಆದರೆ, ಗುರುವಾರ ರಾತ್ರಿ ೧೨ರ ಸಂದರ್ಭದಲ್ಲಿ ದುಷ್ಕರ್ಮಿಗಳು ದೇವೇಶ ಅವರ ಹಳೇ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.
ಹೊಸ ಮನೆಯ ಗೃಹಪ್ರವೇಶ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದ ಕುಟುಂಬಸ್ಥರು ಹಳೇ ಮನೆಯಲ್ಲಿ ಬೆಂಕಿಯನ್ನು ಕಂಡು, ಆಗಮಿಸಿ ನೋಡಿದಾಗ ಬೆಂಕಿಯ ಕೆನ್ನಾಲಿಗೆಗೆ ಮನೆಯೊಳಗಿದ್ದ ನಾಲ್ಕು ಹಸುಗಳು ಸಿಲುಕಿ ಸಾವಿಗೀಡಾಗಿದ್ದವು. ಅಲ್ಲದೆ, ರೈತರು ಬೆಳೆದಿಟ್ಟಿದ್ದ ಜಿಯಾ ಮುಸುಕಿನ ಜೋಳ, ರಾಗಿ, ಭತ್ತ ಹಾಗೂ ಅನೇಕ ಮರದ ಸಾಮಗ್ರಿಗಳು ನಾಶವಾಗಿವೆ. ಸುಮಾರು ೧೫ ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ.
ನಂತರ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಪಶು ವೈದ್ಯ ಇಲಾಖೆಯವರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈತ ದೇವೇಶ ಅವರ ಬೆಳವಣಿಗೆ ಸಹಿಸಲಾಗದೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಹಸುಗಳು, ದವಸ-ಧಾನ್ಯ, ಮರಗಳು ಎಲ್ಲಾ ನಾಶವಾಗಿವೆ. ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಬೇಕಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕ ಉಂಟಾಗಿದೆ ಎಂದು ರೈತ ಮುಖಂಡ ನಂದಕುಮಾರ್ ಹೇಳಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…