Mysore
26
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ.

ಬದನವಾಳುವಿನ ವಿಜಯೇಂದ್ರ ಹಾಗೂ ಪ್ರಭುಸ್ವಾಮಿ ಎಂಬುವವರಿಗೆ ಸೇರಿದ ಕಬ್ಬಿನ ಫಸಲು ಬೆಂಕಿಗೆ ಸಂಪೂರ್ಣ ಹಾನಿಯಾಗಿದ್ದು, ರೈತರ ಗೋಳು ಹೇಳತೀರದಾಗಿದೆ.

ಐದು ಏಕರೆ ಪ್ರದೇಶದಲ್ಲಿ ಇವರಿಬ್ಬರು ಕಬ್ಬು ಬೆಳೆದಿದ್ದರು. ಇನ್ನೇನು ಕಟಾವಿಗೆ ಬಂದಿದ್ದ ಕಬ್ಬಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಪರಿಣಾಮ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

 

Tags:
error: Content is protected !!