ಮೈಸೂರು : ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿಗಾಗಿ ಅಕ್ರಮವಾಗಿ ಬಳಸಿಕೊಳ್ಳುತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ದಲಿತ ಮಹಾಸಭಾ ರಾಜ್ಯ ಸಂಚಾಲಕ ಎಸ್.ಸುಂದರ್ ಹಣಕೊಳ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಸಮುದಾಯಕ್ಕೆ, ಜಾತಿಗೆ ಸೇರಿದವಲ್ಲ. ಕಾಂಗ್ರೆಸ್ ಸರ್ಕಾರ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು, ಆರ್ಥಿಕ ಮುಗ್ಗಟ್ಟು ಎದುರಾಗಿ ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಇದು ಡಾ.ಬಿ.ಆರ್. ಅಂಬೇಡ್ಕರ್ ನೀಡಿರುವ ಮೀಸಲಾತಿಯನ್ನೇ ಬುಡಮೇಲು ಮಾಡಿದೆ. ಸೆಕ್ಷನ್ 7ಡಿ ದುರುಪಯೋಗವಾಗುತ್ತಿದೆ ಎಂದು ರದ್ದು ಮಾಡಿ, ಸೆಕ್ಷನ್ 7ಸಿ ಉಳಿಸಿಕೊಂಡರೆ ಅದರ ಮುಖೇನ ಪರಿಶಿಷ್ಟರ ಮೀಸಲು ಹಣವನ್ನು, ಅದಕ್ಕಿಂತಲೂ ಹೆಚ್ಚು ದುರುಪಯೋಗವಾಗುತ್ತಿದೆ. ಸೆಕ್ಷನ್ 7ಸಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿ, ವರ್ಗದವರ ಬೆಂಬಲಿಗರಾಗಿ ಅವರುಗಳನ್ನೇ ತುಳಿಯುತ್ತಿರುವ ಸಿದ್ದರಾಮಯ್ಯ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಪರಿಶಿಷ್ಟರು ಧ್ವನಿ ಎತ್ತಬೇಕಿದೆ. ಇಬ್ಬರೂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಬಂಧಿಸಲು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಾಗುವವರೆಗೂ ರಾಜ್ಯಾದಂತ ಪ್ರತಿಭಟಿಸಲಾಗುತ್ತದೆ. ಹಣ ವರ್ಗಾವಣೆ ತಡೆ ಕೋರಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…