ಮೈಸೂರು : ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿಗಾಗಿ ಅಕ್ರಮವಾಗಿ ಬಳಸಿಕೊಳ್ಳುತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ದಲಿತ ಮಹಾಸಭಾ ರಾಜ್ಯ ಸಂಚಾಲಕ ಎಸ್.ಸುಂದರ್ ಹಣಕೊಳ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಸಮುದಾಯಕ್ಕೆ, ಜಾತಿಗೆ ಸೇರಿದವಲ್ಲ. ಕಾಂಗ್ರೆಸ್ ಸರ್ಕಾರ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಮೀಸಲು ಹಣವನ್ನು, ಆರ್ಥಿಕ ಮುಗ್ಗಟ್ಟು ಎದುರಾಗಿ ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಇದು ಡಾ.ಬಿ.ಆರ್. ಅಂಬೇಡ್ಕರ್ ನೀಡಿರುವ ಮೀಸಲಾತಿಯನ್ನೇ ಬುಡಮೇಲು ಮಾಡಿದೆ. ಸೆಕ್ಷನ್ 7ಡಿ ದುರುಪಯೋಗವಾಗುತ್ತಿದೆ ಎಂದು ರದ್ದು ಮಾಡಿ, ಸೆಕ್ಷನ್ 7ಸಿ ಉಳಿಸಿಕೊಂಡರೆ ಅದರ ಮುಖೇನ ಪರಿಶಿಷ್ಟರ ಮೀಸಲು ಹಣವನ್ನು, ಅದಕ್ಕಿಂತಲೂ ಹೆಚ್ಚು ದುರುಪಯೋಗವಾಗುತ್ತಿದೆ. ಸೆಕ್ಷನ್ 7ಸಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿ, ವರ್ಗದವರ ಬೆಂಬಲಿಗರಾಗಿ ಅವರುಗಳನ್ನೇ ತುಳಿಯುತ್ತಿರುವ ಸಿದ್ದರಾಮಯ್ಯ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಪರಿಶಿಷ್ಟರು ಧ್ವನಿ ಎತ್ತಬೇಕಿದೆ. ಇಬ್ಬರೂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಬಂಧಿಸಲು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಾಗುವವರೆಗೂ ರಾಜ್ಯಾದಂತ ಪ್ರತಿಭಟಿಸಲಾಗುತ್ತದೆ. ಹಣ ವರ್ಗಾವಣೆ ತಡೆ ಕೋರಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…