ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದೆ. ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಯ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ ರವಿಕುಮಾರ್ ಮಾತನಾಡಿ, ಈ ದಿನ ರಾಜ್ಯಾದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21,735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ. ಇದೇ ತಿಂಗಳ 16ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಪಂ ಮಜಿ ಅಧ್ಯಕ್ಷ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷ ದಿನೇಶ್, ವೈದ್ಯಾಧಿಕಾರಿ ಡಾ.ಚಂದ್ರಕಲಾ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…