ಮೈಸೂರು

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದೆ. ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಎಲ್ಲಾ ಶಾಲೆಯ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ ರವಿಕುಮಾರ್ ಮಾತನಾಡಿ, ಈ ದಿನ ರಾಜ್ಯಾದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21,735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ. ಇದೇ ತಿಂಗಳ 16ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಪಂ ಮಜಿ ಅಧ್ಯಕ್ಷ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷ ದಿನೇಶ್, ವೈದ್ಯಾಧಿಕಾರಿ ಡಾ.ಚಂದ್ರಕಲಾ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

3 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

3 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

3 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

3 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

3 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

6 hours ago