ಮೈಸೂರು

ಅರಣ್ಯದಂಚಿನ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಶಾಸಕ ಚಿಕ್ಕಮಾದು ಸೂಚನೆ

ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಭಾಗದಲ್ಲಿ ವಾಸವಾಗಿದ್ದ ಕೆಲವರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ ಆದರೆ ಅವರ ಬಳಿ ಹಕ್ಕು ಪತ್ರ ಇಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ಡಿ.ಬಿ.ಕುಪ್ಪೆಯಲ್ಲಿ 376 ಜನರಿಗೆ ಜಮೀನಿನ ಹಕ್ಕು ಪತ್ರ ನೀಡಲು ದಾಖಲೆಗಳನ್ನು ಪರಿಶೀಲಿಸಲಾಗಿದೆ. ತಿರಸ್ಕೃತಗೊಂಡಿರುವ 90 ಹಕ್ಕು ಪತ್ರಗಳನ್ನು ಮರು ಪರಿಶೀಲಿಸಿ ಅದರಲ್ಲಿ ಅರ್ಹರಿದ್ದಲ್ಲಿ ಹಕ್ಕು ಪತ್ರ ನೀಡಿ ಎಂದರು.

ಇದನ್ನೂ ಓದಿ:-ಹೆಬ್ಬಾಳದಲ್ಲೂ ನಡೆದಿತ್ತು ಮತ ಕಳವು : ಕ್ಷೇತ್ರದ ಶಾಸಕ, ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ

ಈ ಹಿಂದೆ ನೀಡಲಾಗಿರುವ ಕೆಲವು ಹಕ್ಕು ಪತ್ರಗಳಲ್ಲಿ ಅವರ ಮಕ್ಕಳ ಹೆಸರು ನಮೂದಿಸಿರುವುದಿಲ್ಲ. ಇದರಿಂದ ಮಕ್ಕಳು ಹಕ್ಕು‌ ಪಡೆಯಲು ಸಮಸ್ಯೆಯಾಗುತ್ತಿದ್ದು, ಸರಿಪಡಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಹೆಚ್.ಡಿ ಕೋಟೆ ತಾಲೂಕಿನ ಹರಿಹರಪುರ ಗ್ರಾಮದ ಸರ್ವೆ ನಂ 3 ರಲ್ಲಿ 530 ಎಕರೆ ಭೂಮಿಯಲ್ಲಿ 370 ಎಕರೆ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಉಳಿದಿರುವ 160 ಎಕರೆಯಲ್ಲಿ ಈಗಾಗಲೇ ಮಂಜೂರು ಮಾಡಿ ಉಳಿದಿರುವ 30 ಎಕರೆ ಭೂಮಿಯನ್ನು ಮಂಜೂರು ಮಾಡಲು ಕ್ರಮವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

20 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago