ಮೈಸೂರು

ಅರಣ್ಯದಂಚಿನ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಶಾಸಕ ಚಿಕ್ಕಮಾದು ಸೂಚನೆ

ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಭಾಗದಲ್ಲಿ ವಾಸವಾಗಿದ್ದ ಕೆಲವರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ ಆದರೆ ಅವರ ಬಳಿ ಹಕ್ಕು ಪತ್ರ ಇಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ಡಿ.ಬಿ.ಕುಪ್ಪೆಯಲ್ಲಿ 376 ಜನರಿಗೆ ಜಮೀನಿನ ಹಕ್ಕು ಪತ್ರ ನೀಡಲು ದಾಖಲೆಗಳನ್ನು ಪರಿಶೀಲಿಸಲಾಗಿದೆ. ತಿರಸ್ಕೃತಗೊಂಡಿರುವ 90 ಹಕ್ಕು ಪತ್ರಗಳನ್ನು ಮರು ಪರಿಶೀಲಿಸಿ ಅದರಲ್ಲಿ ಅರ್ಹರಿದ್ದಲ್ಲಿ ಹಕ್ಕು ಪತ್ರ ನೀಡಿ ಎಂದರು.

ಇದನ್ನೂ ಓದಿ:-ಹೆಬ್ಬಾಳದಲ್ಲೂ ನಡೆದಿತ್ತು ಮತ ಕಳವು : ಕ್ಷೇತ್ರದ ಶಾಸಕ, ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ

ಈ ಹಿಂದೆ ನೀಡಲಾಗಿರುವ ಕೆಲವು ಹಕ್ಕು ಪತ್ರಗಳಲ್ಲಿ ಅವರ ಮಕ್ಕಳ ಹೆಸರು ನಮೂದಿಸಿರುವುದಿಲ್ಲ. ಇದರಿಂದ ಮಕ್ಕಳು ಹಕ್ಕು‌ ಪಡೆಯಲು ಸಮಸ್ಯೆಯಾಗುತ್ತಿದ್ದು, ಸರಿಪಡಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಹೆಚ್.ಡಿ ಕೋಟೆ ತಾಲೂಕಿನ ಹರಿಹರಪುರ ಗ್ರಾಮದ ಸರ್ವೆ ನಂ 3 ರಲ್ಲಿ 530 ಎಕರೆ ಭೂಮಿಯಲ್ಲಿ 370 ಎಕರೆ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಉಳಿದಿರುವ 160 ಎಕರೆಯಲ್ಲಿ ಈಗಾಗಲೇ ಮಂಜೂರು ಮಾಡಿ ಉಳಿದಿರುವ 30 ಎಕರೆ ಭೂಮಿಯನ್ನು ಮಂಜೂರು ಮಾಡಲು ಕ್ರಮವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

55 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

4 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

4 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

4 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago