ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಭಾಗದಲ್ಲಿ ವಾಸವಾಗಿದ್ದ ಕೆಲವರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ ಆದರೆ ಅವರ ಬಳಿ ಹಕ್ಕು ಪತ್ರ ಇಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಿ ಎಂದರು.
ಡಿ.ಬಿ.ಕುಪ್ಪೆಯಲ್ಲಿ 376 ಜನರಿಗೆ ಜಮೀನಿನ ಹಕ್ಕು ಪತ್ರ ನೀಡಲು ದಾಖಲೆಗಳನ್ನು ಪರಿಶೀಲಿಸಲಾಗಿದೆ. ತಿರಸ್ಕೃತಗೊಂಡಿರುವ 90 ಹಕ್ಕು ಪತ್ರಗಳನ್ನು ಮರು ಪರಿಶೀಲಿಸಿ ಅದರಲ್ಲಿ ಅರ್ಹರಿದ್ದಲ್ಲಿ ಹಕ್ಕು ಪತ್ರ ನೀಡಿ ಎಂದರು.
ಇದನ್ನೂ ಓದಿ:-ಹೆಬ್ಬಾಳದಲ್ಲೂ ನಡೆದಿತ್ತು ಮತ ಕಳವು : ಕ್ಷೇತ್ರದ ಶಾಸಕ, ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ
ಈ ಹಿಂದೆ ನೀಡಲಾಗಿರುವ ಕೆಲವು ಹಕ್ಕು ಪತ್ರಗಳಲ್ಲಿ ಅವರ ಮಕ್ಕಳ ಹೆಸರು ನಮೂದಿಸಿರುವುದಿಲ್ಲ. ಇದರಿಂದ ಮಕ್ಕಳು ಹಕ್ಕು ಪಡೆಯಲು ಸಮಸ್ಯೆಯಾಗುತ್ತಿದ್ದು, ಸರಿಪಡಿಸಬೇಕಿದೆ ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಹೆಚ್.ಡಿ ಕೋಟೆ ತಾಲೂಕಿನ ಹರಿಹರಪುರ ಗ್ರಾಮದ ಸರ್ವೆ ನಂ 3 ರಲ್ಲಿ 530 ಎಕರೆ ಭೂಮಿಯಲ್ಲಿ 370 ಎಕರೆ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಉಳಿದಿರುವ 160 ಎಕರೆಯಲ್ಲಿ ಈಗಾಗಲೇ ಮಂಜೂರು ಮಾಡಿ ಉಳಿದಿರುವ 30 ಎಕರೆ ಭೂಮಿಯನ್ನು ಮಂಜೂರು ಮಾಡಲು ಕ್ರಮವಹಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…