ಮೈಸೂರು

ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಶಾಸಕ ಡಿ.ರವಿಶಂಕರ್

ಕೆ.ಆರ್‌ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್‌ ನಗರ ಶಾಸಕ ಡಿ.ರವಿಶಂಕರ್‌ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ ಅನ್ನದಾತನಿಗೆ ಶುಭವಾಗಲೆಂದು ಪ್ರಾರ್ಥಿಸಿ ನಾಲೆಗಳಿಗೆ ನೀರು ಹರಿಸಿ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಬರಗಾಲ ಎದುರಿಸಿದ್ದ ಅನ್ನದಾತನಿಗೆ ಈ ಬಾರಿ ವರುಣ ಕೃಪೆ ತೋರಿದ್ದಾನೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿ, ಡ್ಯಾಮ್, ಅಣೆಕಟ್ಟೆಗಳು ಸೇರಿದಂತೆ ಕೆರೆಕಟ್ಟೆಗಳು ತುಂಬಿದೆ. ಹೀಗಾಗಿ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಂತೆಯೇ ನೀರು ಹರಿಸಲಾಗುತ್ತಿದೆ  ಎಂದರು.

ಹವಾಮಾನ ಇಲಾಖೆ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ ಬೀಳುತ್ತದೆ ಎಂದು ಹೇಳಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಕೃಷಿ ಚಟುವಟಿಕೆ ಹಾಗೂ ಬಿತ್ತನೆ ಕಾರ್ಯ ಆರಂಭಿಸಿ ಎಂದು ಹೇಳಿದರು.

ಮುಂಗಾರು ಹಂಗಾಮಿನ ಕೃಷಿಗೆ ಯಾವುದೇ ರೀತಿಯಲ್ಲಿ ರೈತರಿಗೆ ತೊಂದರೆಯಾಗದಂತೆ ಅಗತ್ಯತೆ ಕೈಗೊಳ್ಳುವಂತೆ ಹಾಗೂ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಲವು ತಳಿಯ ಭತ್ತದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳನ್ನು ಸಕಾಲದಲ್ಲಿ ರೈತರಿಗೆ ಪೂರೈಸಲು ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

3 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

4 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

4 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

4 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

5 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

5 hours ago