ಕೆ.ಆರ್ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್ ನಗರ ಶಾಸಕ ಡಿ.ರವಿಶಂಕರ್ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ ಅನ್ನದಾತನಿಗೆ ಶುಭವಾಗಲೆಂದು ಪ್ರಾರ್ಥಿಸಿ ನಾಲೆಗಳಿಗೆ ನೀರು ಹರಿಸಿ ಬಾಗಿನ ಅರ್ಪಿಸಿದರು.
ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಬರಗಾಲ ಎದುರಿಸಿದ್ದ ಅನ್ನದಾತನಿಗೆ ಈ ಬಾರಿ ವರುಣ ಕೃಪೆ ತೋರಿದ್ದಾನೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿ, ಡ್ಯಾಮ್, ಅಣೆಕಟ್ಟೆಗಳು ಸೇರಿದಂತೆ ಕೆರೆಕಟ್ಟೆಗಳು ತುಂಬಿದೆ. ಹೀಗಾಗಿ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಂತೆಯೇ ನೀರು ಹರಿಸಲಾಗುತ್ತಿದೆ ಎಂದರು.
ಹವಾಮಾನ ಇಲಾಖೆ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ ಬೀಳುತ್ತದೆ ಎಂದು ಹೇಳಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಕೃಷಿ ಚಟುವಟಿಕೆ ಹಾಗೂ ಬಿತ್ತನೆ ಕಾರ್ಯ ಆರಂಭಿಸಿ ಎಂದು ಹೇಳಿದರು.
ಮುಂಗಾರು ಹಂಗಾಮಿನ ಕೃಷಿಗೆ ಯಾವುದೇ ರೀತಿಯಲ್ಲಿ ರೈತರಿಗೆ ತೊಂದರೆಯಾಗದಂತೆ ಅಗತ್ಯತೆ ಕೈಗೊಳ್ಳುವಂತೆ ಹಾಗೂ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಲವು ತಳಿಯ ಭತ್ತದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳನ್ನು ಸಕಾಲದಲ್ಲಿ ರೈತರಿಗೆ ಪೂರೈಸಲು ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…