ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕ ಜಿ.ಟಿ ದೇವೇಗೌಡ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿಗೆ ಗ್ರಾಮದ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗೂ ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿ, ದವಸ ಧಾನ್ಯ, ಬಟ್ಟೆ, ಪಾತ್ರೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.
ಶಾಸಕ ಜಿ.ಟಿ ದೇವೇಗೌಡ ಬೆಂಕಿಗೆ ಅನಾಹುತವಾದ 3 ಮನೆಗಳ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಒಂದು ಲಕ್ಷ ರೂ ಪರಿಹಾರ ನೀಡಿದರು. ಅಲ್ಲದೇ ಶೀಘ್ರವೇ ಸರ್ಕಾರದಿಂದ ಪರಿಹಾರ ನೀಡವ ಭರವಸೆ ನೀಡಿದರು.
ಸ್ಥಳಕ್ಕೆ ಸೆಸ್ಕಾಂ ಎಂ.ಡಿ. ಮುನಿಗೋಪಾಲ್ ರಾಜ್, ಎಸ್.ಸಿ.ಸುನೀಲ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳೊಡನೆ ಸ್ಥಳ ಪರಿಶೀಲನೆ ನಡೆಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…