ಮೈಸೂರು

ಬೆಂಕಿಗೆ ಆಹುತಿಯಾದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿದ ಶಾಸಕ ಜಿ.ಟಿ ದೇವೇಗೌಡ

ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕ ಜಿ.ಟಿ ದೇವೇಗೌಡ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿಗೆ ಗ್ರಾಮದ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗೂ ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿ, ದವಸ ಧಾನ್ಯ, ಬಟ್ಟೆ, ಪಾತ್ರೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.

ಶಾಸಕ ಜಿ.ಟಿ ದೇವೇಗೌಡ ಬೆಂಕಿಗೆ ಅನಾಹುತವಾದ 3 ಮನೆಗಳ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಒಂದು ಲಕ್ಷ ರೂ ಪರಿಹಾರ ನೀಡಿದರು. ಅಲ್ಲದೇ ಶೀಘ್ರವೇ ಸರ್ಕಾರದಿಂದ ಪರಿಹಾರ ನೀಡವ ಭರವಸೆ ನೀಡಿದರು.

ಸ್ಥಳಕ್ಕೆ ಸೆಸ್ಕಾಂ ಎಂ.ಡಿ. ಮುನಿಗೋಪಾಲ್ ರಾಜ್, ಎಸ್.ಸಿ.‌ಸುನೀಲ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳೊಡನೆ ಸ್ಥಳ ಪರಿಶೀಲನೆ‌ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

9 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago