ಮೈಸೂರು: ರೈತರು ಸರ್ಕಾರದ ಸಹಾಯಧನದಡಿಯಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆಯ ಬೇಕೆಂದು ಶಾಸಕ ಜಿಟಿ ದೇವೇಗೌಡ ರೈತರಲ್ಲಿ ಕರೆ ನೀಡಿದರು.
ಅವರು ಇಂದು ಮೈಸೂರಿನ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ರೈತರಿಗೆ ಚಾಫ್ ಕಟರ್, ಪವರಿ ಟಿಲ್ಲರ್, ರೋಟವೇಟರ್ಗಳನ್ನು ವಿತರಿಸಿ ಮಾತನಾಡಿದರು.
ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆಯಡಿ ಬೆಳೆ ವಿಮೆಗೆ ನೊಂದಾಣಿ ಪ್ರಾರಂಭವಾಗಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬೇಕು, ಪ್ರಕೃತಿ ವಿಕೋಪ ಹಾಗೂ ಕೀಟರೋಗ ಬಾಧೆಯಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಸಿಗಲಿದೆ ಎಂದು ಜಿಟಿಡಿ ತಿಳಿಸಿದರು.
ಕೃಷಿ ಭಾಗ್ಯ ಯೋಜನೆಯಡಿ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ ಹಾಗೂ ಹಲವಾರು ಸೌಲಭ್ಯಗಳಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಕುರಿತು ಸಹಾಯಕ ಕೃಷಿ ನಿರ್ದೇಶಕರಾದ ಬಿ.ಡಿ.ಜಯರಾಂ ರೈತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಗೋಪಾಲಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ.ಕೆ.ಬಸವೇಗೌಡ, ಸ್ವಾಮಿಗೌಡ, ಮಹೇಶ್, ದೇವೇಗೌಡ, ರಾಮಲಿಂಗ, ಸಣ್ಣಹೈದೇಗೌಡ, ತುಳಸಮ್ಮ, ಚಿಕ್ಕಣ್ಣನಾಯಕ ಹಾಗೂ ಹಲವಾರು ಮುಖಂಡರು ಭಾಗವಹಿಸಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…