ಮೈಸೂರು

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.

ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ೧೩.೫೦ ಕೋಟಿ ರೂ.ಗಳ ವೆಚ್ಚದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ನಂತರ ತೆಂಕಲಕೊಪ್ಪಲು ಗ್ರಾಮದ ಗುರುಮಠ ಆವರಣದಲ್ಲಿ ಆಯೋಜನೆಗೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಲವು ಗ್ಯಾರಂಟಿ ಯೋಜನೆಗಳ ನಡುವೆಯೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಅಭಾಧಿತವಾಗಿ ನಡೆಯುವಂತೆ ಪ್ರತಿದಿನ ಸರ್ಕಾರದ ವಿವಿದ ಇಲಾಖೆಗಳ ಸಚಿವರನ್ನು ಭೇಟಿಯಾಗಿ ಅನುದಾನ ತರುತ್ತಿದ್ದೇನೆ.

ತಾಲೂಕಿನಲ್ಲಿ ಶಾಸಕರಿಂದ ಅನುದಾನ ತರಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ನಡೆಯುತ್ತಿರುವುದನ್ನು ಬಲ್ಲೆ. ಆದರೆ ನನ್ನನ್ನು ಆರಿಸಿ ಶಾಸಕನನ್ನಾಗಿಸಿರುವ ಜನರ ಒಳಿತಿಗಾಗಿ ನಾನು ಅವಿರತ ಶ್ರಮಿಸುತ್ತಿದ್ದೇನೆ. ಮುಂದೆಯೂ ಶ್ರಮಿಸುತ್ತೇನೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಯಿಂದ ಆರಂಭಗೊಂಡು, ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಚಿವರನ್ನು ಸತತ ಭೇಟಿಯಾಗುತ್ತಲೇ ತಾಲೂಕಿನ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ಅನುದಾನ ಪಡೆಯುತ್ತಿದ್ದೇನೆ ಎಂದರು.

ಎಲ್ಲೆಲ್ಲಿ ಏನೇನು ಭೂಮಿ ಪೂಜೆ:
ತೆಂಕಲಕೊಪ್ಪಲು ಗ್ರಾಮದಲ್ಲಿ ೧೦ ಕೋಟಿ ರೂ.ವೆಚ್ಚದಡಿ ೩.೯೨ ಕಿ.ಮೀ.ಉದ್ದದ ತೆಂಕಲಕೊಪ್ಪಲು_ಚೋಳೇನಹಳ್ಳಿ-ಬೋಳನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಹುಸೇನ್‌ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ೧ ಕೋಟಿ ರೂ.ಗಳ ವೆಚ್ಚದಡಿ(ಒಟ್ಟು ೩ ಕೋಟಿ ರೂ.ಗಳು) ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ೮.೪೦ ಲಕ್ಷ ರೂ.ವೆಚ್ಚದಡಿ ತೆಂಕಲಕೊಪ್ಪಲು ಗ್ರಾಮದಲ್ಲಿ ಗ್ರಾ.ಪಂ. ಸುಪರ್ದಿಯ ೨ ಮಾರಾಟ ಮಳಿಗೆಗಳು ಮತ್ತು ಕೊಮ್ಮೇಗೌಡನಕೊಪ್ಪಲು ಗ್ರಾಮದಲ್ಲಿ ಒಂದು ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು. ಅಲ್ಲದೇ ಹುಸೇನ್‌ಪುರ ಮತ್ತು ತೆಂಕಲಕೊಪ್ಪಲು ಗ್ರಾಮದಲ್ಲಿ ತಲಾ ೮ ಲಕ್ಷ ರೂ.ವೆಚ್ಚದಡಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.

 

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

1 hour ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

1 hour ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

1 hour ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

1 hour ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

2 hours ago