ಮೈಸೂರು

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.

ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ೧೩.೫೦ ಕೋಟಿ ರೂ.ಗಳ ವೆಚ್ಚದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ನಂತರ ತೆಂಕಲಕೊಪ್ಪಲು ಗ್ರಾಮದ ಗುರುಮಠ ಆವರಣದಲ್ಲಿ ಆಯೋಜನೆಗೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಲವು ಗ್ಯಾರಂಟಿ ಯೋಜನೆಗಳ ನಡುವೆಯೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಅಭಾಧಿತವಾಗಿ ನಡೆಯುವಂತೆ ಪ್ರತಿದಿನ ಸರ್ಕಾರದ ವಿವಿದ ಇಲಾಖೆಗಳ ಸಚಿವರನ್ನು ಭೇಟಿಯಾಗಿ ಅನುದಾನ ತರುತ್ತಿದ್ದೇನೆ.

ತಾಲೂಕಿನಲ್ಲಿ ಶಾಸಕರಿಂದ ಅನುದಾನ ತರಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ನಡೆಯುತ್ತಿರುವುದನ್ನು ಬಲ್ಲೆ. ಆದರೆ ನನ್ನನ್ನು ಆರಿಸಿ ಶಾಸಕನನ್ನಾಗಿಸಿರುವ ಜನರ ಒಳಿತಿಗಾಗಿ ನಾನು ಅವಿರತ ಶ್ರಮಿಸುತ್ತಿದ್ದೇನೆ. ಮುಂದೆಯೂ ಶ್ರಮಿಸುತ್ತೇನೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಯಿಂದ ಆರಂಭಗೊಂಡು, ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಚಿವರನ್ನು ಸತತ ಭೇಟಿಯಾಗುತ್ತಲೇ ತಾಲೂಕಿನ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ಅನುದಾನ ಪಡೆಯುತ್ತಿದ್ದೇನೆ ಎಂದರು.

ಎಲ್ಲೆಲ್ಲಿ ಏನೇನು ಭೂಮಿ ಪೂಜೆ:
ತೆಂಕಲಕೊಪ್ಪಲು ಗ್ರಾಮದಲ್ಲಿ ೧೦ ಕೋಟಿ ರೂ.ವೆಚ್ಚದಡಿ ೩.೯೨ ಕಿ.ಮೀ.ಉದ್ದದ ತೆಂಕಲಕೊಪ್ಪಲು_ಚೋಳೇನಹಳ್ಳಿ-ಬೋಳನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಹುಸೇನ್‌ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ೧ ಕೋಟಿ ರೂ.ಗಳ ವೆಚ್ಚದಡಿ(ಒಟ್ಟು ೩ ಕೋಟಿ ರೂ.ಗಳು) ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ೮.೪೦ ಲಕ್ಷ ರೂ.ವೆಚ್ಚದಡಿ ತೆಂಕಲಕೊಪ್ಪಲು ಗ್ರಾಮದಲ್ಲಿ ಗ್ರಾ.ಪಂ. ಸುಪರ್ದಿಯ ೨ ಮಾರಾಟ ಮಳಿಗೆಗಳು ಮತ್ತು ಕೊಮ್ಮೇಗೌಡನಕೊಪ್ಪಲು ಗ್ರಾಮದಲ್ಲಿ ಒಂದು ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು. ಅಲ್ಲದೇ ಹುಸೇನ್‌ಪುರ ಮತ್ತು ತೆಂಕಲಕೊಪ್ಪಲು ಗ್ರಾಮದಲ್ಲಿ ತಲಾ ೮ ಲಕ್ಷ ರೂ.ವೆಚ್ಚದಡಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.

 

ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

7 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

11 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

13 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

14 hours ago