ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶದಿಂದ ಕೇಂದ್ರ ನಾಯಕರಿಗೆ ನಾನು ಎಷ್ಟೊಂದು ಪ್ರಭಾವಿ ಎಂದು ತೋರಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾಗಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಾಂತ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕ ತರಲು ಪರದಾಡುತ್ತಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್ಗಳ ಪರಷ್ಕರಣೆಗೆ ಇಳಿದಿದೆ. ಅಲ್ಲದೇ ವಿರೋಧ ಪಕ್ಷವಾಗಿ ನಾವು ಸಾರ್ವಜನಿಕರಿಗೆ ಸರ್ಕಾರದ ನಡೆಯನ್ನು ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲರಾದೆವಾ ಎಂದು ಕಾಣುತ್ತದೆ ಎಂದಿದ್ದಾರೆ.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…