ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯ ಎನ್.ಡಿ.ಯೆ. ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪರವಾಗಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿಎಸ್. ಶ್ರೀವತ್ಸ ರವರು ಕೃಷ್ಣಮೂರ್ತಿಪುರಂ ಬಡಾವಣೆಯಲ್ಲಿ ಮನೆಮನೆಗೆ ತೆರಳಿ ಪಾದಯತ್ರೆಯಲ್ಲಿ ಮತಯಾಚನೆ ಮಾಡಿದರು.
ಇದೇ ಸಂಧರ್ಭದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರು ಮಾತನಾಡಿ ದೇಶಕ್ಕಾಗಿ ಮೋದಿ ಮೈಸೂರು ಗೆ ಯದುವೀರ್ ಎನ್ನುವ ಘೋಷಣೆ ಸಾಮನ್ಯ ನಾಗರೀಕರಲ್ಲಿ ಕೇಳಿಬರುತ್ತಿರುವುದು ಸಂತಸ ತರುತ್ತಿದೆ ಎಂದರು.
ನಾಳೆ ಸಂಜೆ ಪ್ರಧಾನಿ ಮೋದಿ ರವರು ಮಹರಾಜ ಕಾಲೇಜು ಮೈದಾನಕ್ಕೆ ಆಗಮಿಸುತ್ತಿದ್ದು, ಭಾಷಣ ಆಲಿಸಲು ಜನಸಾಮನ್ಯರಿಗೆ ಆಹ್ವಾನಿಸಿದರು, ಹಳೇ ಮೈಸೂರು ಭಾಗದಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ಕಾರ್ಖಾನೆ, ಅಣೆಕಟ್ಟು, ಸಾಂಸ್ಕೃತಿಕ ಕಲೆ ಸಾಹಿತ್ಯ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಿದ ಯದುಕುಲದ ಕುಡಿ ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಕೃಷ್ಣರಾಜ ಕ್ಷೇತ್ರದಿಂದ ಅತಿ ಹೆಚ್ಚು ಮತಗಳ ಮುನ್ನಡೆ ನೀಡಿ ಜಯಗೊಳಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ವಿಶ್ವೇಶ್ವರಯ್ಯ,ನಾಗರಾಜ್ ಬಿಲ್ಲಯ್ಯ, ಕೃಷ್ಣ, ರವಿ, ಅರುಣ್, ಸೋಮು ,ದೀಪು, ಕೃಷ್ಣ, ಸುಂದರ್, ಅಜಯ್ ಶಾಸ್ತ್ರಿ, ಜೋಗಿ ಮಂಜು, ಓಂ ಶ್ರೀನಿವಾಸ್, ಪ್ರಹ್ಲಾದ್, ಬಸವರಾಜ್, ಮಮತ, ಮುರುಳಿ, ಮಧು, ರಾಜಗೋಪಾಲ್,ಚಂದ್ರಪ್ಪ,ಕಿಶೋರ್, ಪ್ರದೀಪ್, ರಘು, ಮಂಜುನಾಥ್ , ಮುಂತಾದವರು ಇದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…