ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರವೂ ಕೂಡಾ ಕ್ಷೇತ್ರದ ಹಲವೆಡೆ ಸಂಚರಿಸಿ, ವಿವಿಧ ಕಾಮಗಾರಿಗಳ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸಿದರು.
ಮೊದಲಿಗೆ ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಳೆ ಬಂದರೇ ನೀರು ನಿಂತು ಸಮಸ್ಯೆ ಉಂಟಾಗುತ್ತದೆ ಎಂಬ ದೂರಿಗೆ ಸ್ಪಂದಿಸಿ, ಮುಡಾ ಮತ್ತು ಮೈಸೂರು ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಸ್ಮಶಾನಕ್ಕೆ ತೆರಳಿ ಪರಿಶೀಲನೆ ನಡೆಸಿದ ಶಾಸಕರು, ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೂಡಲೇ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಬಳಿಕ ಸ್ಮಶಾನದ ಆವರಣದಲ್ಲಿ ಸುಮಾರು ೯೮ ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಯೋಗ್ಯಾಸ್ ಉತ್ಪಾದನೆಯ ಕಾಮಗಾರಿಯನ್ನು ಸಹ ಪರಿಶೀಲಿಸಿ, ಅಗತ್ಯ ಮಾಹಿತಿ ಪಡೆದುಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.
ಇದೇ ವೇಳೆ ಪಿಂಜರಾಪೋಲ್ ರಸ್ತೆಯಲ್ಲಿ ಸಂಚರಿಸಿದ ಶಾಸಕರು, ಈ ಮಾರ್ಗದಲ್ಲಿ ಮಳೆ ನೀರು ಮುಂದಕ್ಕೆ ಹರಿಯದೇ ತೊಂದರೆಯಾಗಿದೆ ಎಂಬ ಸಮಸ್ಯೆಯನ್ನು ಆಲಿಸಿ, ಪರಿಶೀಲನೆ ನಡೆಸಿದ ವೇಳೆ ಮಾರ್ಗ ಮಧ್ಯದಲ್ಲಿ ಕೌಂಪೌಂಡ್ ಒಂದನ್ನು ನಿರ್ಮಾಣ ಮಾಡಿರುವುದರಿಂದ ಈ ಸಮಸ್ಯೆ ಉದ್ಭವಿಸಿದೆ ಎಂಬುದನ್ನು ಕಣ್ಣಾರೆ ಕಂಡರು. ಬಳಿಕ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಈ ಕುರಿತು ನಿರ್ದೇಶನ ನೀಡಿ, ಮಳೆ ನೀರು ಸರಾಗವಾಗಿ ಹರಿಯಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಹ ಸೂಚಿಸಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…