ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ಗೆ ಬಿಜೆಪಿ ನಾಯಕರೂ ಹಲಾಲ್ ಬಜೆಟ್ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ ಎಂಬ ಪದವನ್ನು ಬಿಟ್ಟು ರಾಜಕೀಯ ಮಾಡಲಿ. ಮುಸಲ್ಮಾನರ ಹೆಸರು ಬಳಸದೆ ಸಂಘಟನೆ ಮಾಡಬೇಕು. ನಮ್ಮ ಸಮುದಾಯದ ಹೆಸರು ಹೇಳಿ ರಾಜಕೀಯ ಮಾಡುತ್ತಿರುವುದೇ ಬಿಜೆಪಿ ಪಕ್ಷ, ಅದೇ ಅವರ ಬಂಡವಾಳವಾಗಿದೆ. ರಾಷ್ಟ್ರದಲ್ಲಿ ಶೇ.20ರಷ್ಟು ಜನಸಂಖ್ಯೆ ಇದೆ. ಆದರೂ ದೇಶಕ್ಕಾಗಿ ನೀಡಿರುವ ಕೊಡುಗೆ ಅಪಾರವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತ್ಯಾಗ ಬಲಿದಾನ ಮಾಡಿದ್ದೇವೆ. ಆದರೆ ಬ್ರಿಟಿಷರ ಬೂಟ ಅನ್ನು ನೆಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದಿಂದ ಮುಸಲ್ಮಾನ ಸಮುದಾಯಕ್ಕೆ ಏನಾದರೂ ಘೋಷಣೆ ಮಾಡಿದರೆ ಸಾಕು, ಬಿಜೆಪಿ ಪಕ್ಷಕ್ಕೆ ಹೊಟ್ಟೆ ಉರಿ ಶುರುವಾಗುತ್ತೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ನಲ್ಲಿ ಎಲ್ಲರಿಗೂ ಒತ್ತು ನೀಡಿದೆ. ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲದಕ್ಕೂ ಸಹ ಅನುದಾನ ನೀಡಿದೆ. ಹೀಗಾಗಿ ಬಿಜೆಪಿ ಅವರು ಏನು ಬೇಕಾದರೂ ಹೇಳಲಿ. ಈ ಬಾರಿಯ ಬಜೆಟ್ ರಾಜ್ಯ ಅಭಿವೃದ್ಧಿಗೆ ಪೂರಕವಾಗಿದೆ. ಹೀಗಾಗಿ ಹಲಾಲ್ ಎಂದರೂ ನಾವೇನೂ ಬೇಸರ ಮಾಡಿಕೊಳ್ಳುವುದಿಲ್ಲ. ಭಾರತ ನಮ್ಮ ದೇಶವಾಗಿದೆ. ಅವರಿಗೆ ಈ ದೇಶದಲ್ಲ ಇರಲು ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ನಮಗೂ ಇದೆ ಎಂದು ಟಾಂಗ್ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…