ಮೈಸೂರು

ಹಲಾಲ್‌ ಬಜೆಟ್‌ ಎಂದ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ ಎಂಬ ಪದವನ್ನು ಬಿಟ್ಟು ರಾಜಕೀಯ ಮಾಡಲಿ. ಮುಸಲ್ಮಾನರ ಹೆಸರು ಬಳಸದೆ ಸಂಘಟನೆ ಮಾಡಬೇಕು. ನಮ್ಮ ಸಮುದಾಯದ ಹೆಸರು ಹೇಳಿ ರಾಜಕೀಯ ಮಾಡುತ್ತಿರುವುದೇ ಬಿಜೆಪಿ ಪಕ್ಷ, ಅದೇ ಅವರ ಬಂಡವಾಳವಾಗಿದೆ. ರಾಷ್ಟ್ರದಲ್ಲಿ ಶೇ.20ರಷ್ಟು ಜನಸಂಖ್ಯೆ ಇದೆ. ಆದರೂ ದೇಶಕ್ಕಾಗಿ ನೀಡಿರುವ ಕೊಡುಗೆ ಅಪಾರವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತ್ಯಾಗ ಬಲಿದಾನ ಮಾಡಿದ್ದೇವೆ. ಆದರೆ ಬ್ರಿಟಿಷರ ಬೂಟ ಅನ್ನು ನೆಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದಿಂದ ಮುಸಲ್ಮಾನ ಸಮುದಾಯಕ್ಕೆ ಏನಾದರೂ ಘೋಷಣೆ ಮಾಡಿದರೆ ಸಾಕು, ಬಿಜೆಪಿ ಪಕ್ಷಕ್ಕೆ ಹೊಟ್ಟೆ ಉರಿ ಶುರುವಾಗುತ್ತೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್‌ನಲ್ಲಿ ಎಲ್ಲರಿಗೂ ಒತ್ತು ನೀಡಿದೆ. ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲದಕ್ಕೂ ಸಹ ಅನುದಾನ ನೀಡಿದೆ. ಹೀಗಾಗಿ ಬಿಜೆಪಿ ಅವರು ಏನು ಬೇಕಾದರೂ ಹೇಳಲಿ. ಈ ಬಾರಿಯ ಬಜೆಟ್‌ ರಾಜ್ಯ ಅಭಿವೃದ್ಧಿಗೆ ಪೂರಕವಾಗಿದೆ. ಹೀಗಾಗಿ ಹಲಾಲ್ ಎಂದರೂ ನಾವೇನೂ ಬೇಸರ ಮಾಡಿಕೊಳ್ಳುವುದಿಲ್ಲ. ಭಾರತ ನಮ್ಮ ದೇಶವಾಗಿದೆ. ಅವರಿಗೆ ಈ ದೇಶದಲ್ಲ ಇರಲು ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ನಮಗೂ ಇದೆ ಎಂದು ಟಾಂಗ್‌ ನೀಡಿದರು.

ಅರ್ಚನ ಎಸ್‌ ಎಸ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

5 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

5 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

6 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

6 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

6 hours ago