ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್ ಸೇಠ್ ಚಾಲನೆ ನೀಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ ಮಾಲೀಕರಿಗೆ ಶಾಸಕ ತನ್ವಿರ್ ಸೇಠ್ ಇ-ಖಾತಾ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಶಾಸಕ ತನ್ವಿರ್ ಸೇಠ್ ಅವರು, ಇ -ಖಾತಾ ಮಾಡುವುದರಿಂದ ಯಾರು ಸಹ ದಾಖಲೆಗಳನ್ನು ನಕಲು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲರು ಇ -ಖಾತೆ ಮಾಡಿಸಿಕೊಳ್ಳಬೇಕು.
ಇ – ಖಾತೆ ಮಾಡಿಸಿಕೊಳ್ಳುವುದರಿಂದ ಯಾವುದೇ ರೀತಿಯ ದಾಖಲಾತಿ ದುರ್ಬಳಕೆ ಉಂಟಾಗುವುದಿಲ್ಲ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ಜನರಿಗೆ ಸಹಕಾರಿಯಾಗಲೆಂದು ಇ -ಖಾತಾ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ತಮ್ಮ ತಮ್ಮ ಅಸ್ತಿಗಳಿಗೆ ತೆರಿಗೆ ನೀಡುವ ಜನರಿಗೆ ಮೂಲ ಸೌಕರ್ಯವನ್ನು ಪಾಲಿಕೆ ಒದಗಿಸಬೇಕು.
ಕಂದಾಯ ಅಧಿಕಾರಿಗಳು ಅಸ್ತಿ ತೆರಿಗೆ ಸಂಗ್ರಹಿಸುವಾಗ ಅವರು ಇ -ಖಾತೆ ಮಾಡಿಸಿದ್ದಾರಾ ಎಂದು ಪರಿಶೀಲಿಸಬೇಕು, ಯಾರು ಇ-ಖಾತೆಗಳನ್ನು ಮಾಡಿಸಿಕೊಂಡಿಲ್ಲವೋ ಅಂತಹವರಿಗೆ ಇ-ಖಾತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕೆಲವು ಲೋಪದೋಷ ಇರುವ ಆಸ್ತಿಗಳಿಗೆ ಖಾತಾ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈಗಲೂ ಕಾಲ ಮಿಂಚಿಲ್ಲ ಸರಿಯಾದ ದಾಖಲೆ ನೀಡಿ ಇ – ಖಾತೆಯನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕು.
ಎನ್. ಆರ್. ಕ್ಷೇತ್ರದಲ್ಲಿ ತೆರಿಗೆ ಸಂಗ್ರಹ ಕಡಿಮೆ ಇದೆ, ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ತೆರಿಗೆ ಕಟ್ಟುವವರಿಗೆ ನೀರು, ಯುಜಿಡಿ ಹಾಗೂ ಇತರೆ ಮೂಲ ಸೌಕರ್ಯವನ್ನು ಸೂಕ್ತವಾಗಿ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಶಾಸಕ ತನ್ವಿರ್ ಸೇಠ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…