ಮೈಸೂರು

ಮೈಸೂರಿನ ನರಸಿಂಹರಾಜ ಕ್ಷೇತ್ರದ ಇ -ಖಾತಾ ಅಭಿಯಾನಕ್ಕೆ ಶಾಸಕ ತನ್ವಿರ್ ಸೇಠ್‌ ಚಾಲನೆ

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್‌.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ ಮಾಲೀಕರಿಗೆ ಶಾಸಕ ತನ್ವಿರ್ ಸೇಠ್ ಇ-ಖಾತಾ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ತನ್ವಿರ್ ಸೇಠ್ ಅವರು, ಇ -ಖಾತಾ ಮಾಡುವುದರಿಂದ ಯಾರು ಸಹ ದಾಖಲೆಗಳನ್ನು ನಕಲು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲರು ಇ -ಖಾತೆ ಮಾಡಿಸಿಕೊಳ್ಳಬೇಕು.
ಇ – ಖಾತೆ ಮಾಡಿಸಿಕೊಳ್ಳುವುದರಿಂದ ಯಾವುದೇ ರೀತಿಯ ದಾಖಲಾತಿ ದುರ್ಬಳಕೆ ಉಂಟಾಗುವುದಿಲ್ಲ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ಜನರಿಗೆ ಸಹಕಾರಿಯಾಗಲೆಂದು ಇ -ಖಾತಾ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

ತಮ್ಮ ತಮ್ಮ ಅಸ್ತಿಗಳಿಗೆ ತೆರಿಗೆ ನೀಡುವ ಜನರಿಗೆ ಮೂಲ ಸೌಕರ್ಯವನ್ನು ಪಾಲಿಕೆ ಒದಗಿಸಬೇಕು.
ಕಂದಾಯ ಅಧಿಕಾರಿಗಳು ಅಸ್ತಿ ತೆರಿಗೆ ಸಂಗ್ರಹಿಸುವಾಗ ಅವರು ಇ -ಖಾತೆ ಮಾಡಿಸಿದ್ದಾರಾ ಎಂದು ಪರಿಶೀಲಿಸಬೇಕು, ಯಾರು ಇ-ಖಾತೆಗಳನ್ನು ಮಾಡಿಸಿಕೊಂಡಿಲ್ಲವೋ ಅಂತಹವರಿಗೆ ಇ-ಖಾತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕೆಲವು ಲೋಪದೋಷ ಇರುವ ಆಸ್ತಿಗಳಿಗೆ ಖಾತಾ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈಗಲೂ ಕಾಲ ಮಿಂಚಿಲ್ಲ ಸರಿಯಾದ ದಾಖಲೆ ನೀಡಿ ಇ – ಖಾತೆಯನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕು.
ಎನ್. ಆರ್. ಕ್ಷೇತ್ರದಲ್ಲಿ ತೆರಿಗೆ ಸಂಗ್ರಹ ಕಡಿಮೆ ಇದೆ, ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ತೆರಿಗೆ ಕಟ್ಟುವವರಿಗೆ ನೀರು, ಯುಜಿಡಿ ಹಾಗೂ ಇತರೆ ಮೂಲ ಸೌಕರ್ಯವನ್ನು ಸೂಕ್ತವಾಗಿ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಶಾಸಕ ತನ್ವಿರ್ ಸೇಠ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

21 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

27 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

28 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

29 mins ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

30 mins ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

30 mins ago