ಮೈಸೂರು

ಮೈಸೂರಿನ ನರಸಿಂಹರಾಜ ಕ್ಷೇತ್ರದ ಇ -ಖಾತಾ ಅಭಿಯಾನಕ್ಕೆ ಶಾಸಕ ತನ್ವಿರ್ ಸೇಠ್‌ ಚಾಲನೆ

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್‌ ಸೇಠ್‌ ಚಾಲನೆ ನೀಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್‌.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ ಮಾಲೀಕರಿಗೆ ಶಾಸಕ ತನ್ವಿರ್ ಸೇಠ್ ಇ-ಖಾತಾ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ತನ್ವಿರ್ ಸೇಠ್ ಅವರು, ಇ -ಖಾತಾ ಮಾಡುವುದರಿಂದ ಯಾರು ಸಹ ದಾಖಲೆಗಳನ್ನು ನಕಲು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲರು ಇ -ಖಾತೆ ಮಾಡಿಸಿಕೊಳ್ಳಬೇಕು.
ಇ – ಖಾತೆ ಮಾಡಿಸಿಕೊಳ್ಳುವುದರಿಂದ ಯಾವುದೇ ರೀತಿಯ ದಾಖಲಾತಿ ದುರ್ಬಳಕೆ ಉಂಟಾಗುವುದಿಲ್ಲ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ಜನರಿಗೆ ಸಹಕಾರಿಯಾಗಲೆಂದು ಇ -ಖಾತಾ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.

ತಮ್ಮ ತಮ್ಮ ಅಸ್ತಿಗಳಿಗೆ ತೆರಿಗೆ ನೀಡುವ ಜನರಿಗೆ ಮೂಲ ಸೌಕರ್ಯವನ್ನು ಪಾಲಿಕೆ ಒದಗಿಸಬೇಕು.
ಕಂದಾಯ ಅಧಿಕಾರಿಗಳು ಅಸ್ತಿ ತೆರಿಗೆ ಸಂಗ್ರಹಿಸುವಾಗ ಅವರು ಇ -ಖಾತೆ ಮಾಡಿಸಿದ್ದಾರಾ ಎಂದು ಪರಿಶೀಲಿಸಬೇಕು, ಯಾರು ಇ-ಖಾತೆಗಳನ್ನು ಮಾಡಿಸಿಕೊಂಡಿಲ್ಲವೋ ಅಂತಹವರಿಗೆ ಇ-ಖಾತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಕೆಲವು ಲೋಪದೋಷ ಇರುವ ಆಸ್ತಿಗಳಿಗೆ ಖಾತಾ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈಗಲೂ ಕಾಲ ಮಿಂಚಿಲ್ಲ ಸರಿಯಾದ ದಾಖಲೆ ನೀಡಿ ಇ – ಖಾತೆಯನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕು.
ಎನ್. ಆರ್. ಕ್ಷೇತ್ರದಲ್ಲಿ ತೆರಿಗೆ ಸಂಗ್ರಹ ಕಡಿಮೆ ಇದೆ, ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ತೆರಿಗೆ ಕಟ್ಟುವವರಿಗೆ ನೀರು, ಯುಜಿಡಿ ಹಾಗೂ ಇತರೆ ಮೂಲ ಸೌಕರ್ಯವನ್ನು ಸೂಕ್ತವಾಗಿ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಶಾಸಕ ತನ್ವಿರ್ ಸೇಠ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago