ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ಇ-ಖಾತಾ ಅಭಿಯಾನಕ್ಕೆ ಶಾಸಕ ತನ್ವೀರ್ ಸೇಠ್ ಚಾಲನೆ ನೀಡಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಏಪ್ರಿಲ್.11) ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸೀಫ್, ಕಂದಾಯ ಹಾಗೂ ಉಪ ಕಂದಾಯ ಅಧಿಕಾರಿಗಳು, ಆಸ್ತಿ ಮಾಲೀಕರು ಭಾಗಿಯಾಗಿದ್ದು, ಆಸ್ತಿ ಮಾಲೀಕರಿಗೆ ಶಾಸಕ ತನ್ವಿರ್ ಸೇಠ್ ಇ-ಖಾತಾ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಶಾಸಕ ತನ್ವಿರ್ ಸೇಠ್ ಅವರು, ಇ -ಖಾತಾ ಮಾಡುವುದರಿಂದ ಯಾರು ಸಹ ದಾಖಲೆಗಳನ್ನು ನಕಲು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲರು ಇ -ಖಾತೆ ಮಾಡಿಸಿಕೊಳ್ಳಬೇಕು.
ಇ – ಖಾತೆ ಮಾಡಿಸಿಕೊಳ್ಳುವುದರಿಂದ ಯಾವುದೇ ರೀತಿಯ ದಾಖಲಾತಿ ದುರ್ಬಳಕೆ ಉಂಟಾಗುವುದಿಲ್ಲ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ. ಜನರಿಗೆ ಸಹಕಾರಿಯಾಗಲೆಂದು ಇ -ಖಾತಾ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ತಮ್ಮ ತಮ್ಮ ಅಸ್ತಿಗಳಿಗೆ ತೆರಿಗೆ ನೀಡುವ ಜನರಿಗೆ ಮೂಲ ಸೌಕರ್ಯವನ್ನು ಪಾಲಿಕೆ ಒದಗಿಸಬೇಕು.
ಕಂದಾಯ ಅಧಿಕಾರಿಗಳು ಅಸ್ತಿ ತೆರಿಗೆ ಸಂಗ್ರಹಿಸುವಾಗ ಅವರು ಇ -ಖಾತೆ ಮಾಡಿಸಿದ್ದಾರಾ ಎಂದು ಪರಿಶೀಲಿಸಬೇಕು, ಯಾರು ಇ-ಖಾತೆಗಳನ್ನು ಮಾಡಿಸಿಕೊಂಡಿಲ್ಲವೋ ಅಂತಹವರಿಗೆ ಇ-ಖಾತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕೆಲವು ಲೋಪದೋಷ ಇರುವ ಆಸ್ತಿಗಳಿಗೆ ಖಾತಾ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಈಗಲೂ ಕಾಲ ಮಿಂಚಿಲ್ಲ ಸರಿಯಾದ ದಾಖಲೆ ನೀಡಿ ಇ – ಖಾತೆಯನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕು.
ಎನ್. ಆರ್. ಕ್ಷೇತ್ರದಲ್ಲಿ ತೆರಿಗೆ ಸಂಗ್ರಹ ಕಡಿಮೆ ಇದೆ, ಅಧಿಕಾರಿಗಳು ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ತೆರಿಗೆ ಕಟ್ಟುವವರಿಗೆ ನೀರು, ಯುಜಿಡಿ ಹಾಗೂ ಇತರೆ ಮೂಲ ಸೌಕರ್ಯವನ್ನು ಸೂಕ್ತವಾಗಿ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಶಾಸಕ ತನ್ವಿರ್ ಸೇಠ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…