ಮೈಸೂರು

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ. ಶಾಸಕ ಜಿ.ಟಿ.ದೇವೇಗೌಡರ ಹೆಸರನ್ನು ನನ್ನ ಬಳಿ ಹೇಳಲೇಬೇಡಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

ಮೈಸೂರು ನಗರದಲ್ಲಿ ಶುಕ್ರವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿ,ರಾಜ್ಯದಲ್ಲಿ ಮತ್ತು ದೇಶದಲ್ಲಿ ಎಚ್.ಡಿ. ದೇವೇಗೌಡರು ರಾಜಕಾರಣ ಮಾಡಿಕೊಂಡು ಒಂದು ಗೌರವ ಉಳಿಸಿಕೊಂಡು ಬಂದಿದ್ದಾರೆ. ೬೦ ವರ್ಷಗಳ ರಾಜಕೀಯದಲ್ಲಿ ಅಧಿಕಾರದಲ್ಲಿ ಇದ್ದಿದ್ದು ಕಡಿಮೆ. ಅವರ ರಾಜಕೀಯ ಬಳುವಳಿ ನನಗೂ ಕೊಟ್ಟಿದ್ದಾರೆ. ನಾವು ಅಧಿಕಾರಕ್ಕಿಂತ ವಿರೋಧ ಪಕ್ಷದಲ್ಲಿ ಇದ್ದಿದ್ದು ಹೆಚ್ಚು. ೨೦೦೭ರ ನಂತರ ಜೆಡಿಎಸ್ ನಡೆಸುವ ಜವಾಬ್ದಾರಿ ನನ್ನ ಹೆಗಲಿಗೆ ಬಿತ್ತು. ಪಕ್ಷಕ್ಕೆ ಆರ್ಥಿಕವಾಗಿ ಶಕ್ತಿ ಇಲ್ಲದಿದ್ದರೂ. ಇನ್ನು ರಾಜ್ಯದಲ್ಲಿ ಅಸ್ತಿತ್ವ ಇಟ್ಟುಕೊಂಡಿದ್ದೇವೆ. ಇದು ಕಾರ್ಯಕರ್ತರ ಪಕ್ಷ ಮತ್ತು ಅವರೇ ಒಂದು ಶಕ್ತಿಯಾಗಿದ್ದಾರೆ ಎಂದರು. ನಿಜವಾದ ಅಗ್ನಿ ಪರೀಕ್ಷೆ ಇರುವುದು ಮುಂದಿನ ೨೦೨೮ಕ್ಕೆ .ಮುಂದಿನ ದಿನಗಳಲ್ಲಿ ಹಣ ಬಲ ತೋಳ್ಬಲದ ವಿರುದ್ಧ ಹೋರಾಟ ಮಾಡಬೇಕಿದೆ. ಪಕ್ಷ ಉಳಿಸುವುದಕ್ಕೆ ನಿಜವಾದ ಜೆನ್ ಜಿ ತಲೆಮಾರಿನ ಕಾರ್ಯಕರ್ತರು ಇದ್ದಾರೆ ಎಂದರು.

ಪರಿಷತ್ ಚುನಾವಣೆಯಲ್ಲಿ ಕ್ರಾಸ್ ವೋಟ್ ಮಾಡಿರುವವರ ಸಂಪೂರ್ಣ ಮಾಹಿತಿಯಿದೆ. ಈ ಫಲಿತಾಂಶ ನನಗೆ ಮೊದಲೇ ಗೊತ್ತು. ಅದರಿಂದ ನಾನು ವಿಚಲಿತನಾಗಿಲ್ಲ. ದೃತಿಗೆಡಲ್ಲ. ಕ್ಷೇತ್ರದಲ್ಲಿ ಅಭಿವೃದಿ ಆಗುತ್ತಿಲ್ಲ ಅಂತ. ಮುಂದೆ ಏನು ಮಾಡಬೇಕು ಅಂತ ಕೆಲವರು ತೀರ್ಮಾನ ಮಾಡಿಕೊಂಡಿದ್ದಾರೆ. ನಾಲ್ಕು ಜನರು ಕ್ರಾಸ್ ವೋಟ್ ಹಾಕಿದ್ದಾರೆ. ಯಾರು ಯಾರು ಅಂತಾನೂ ಗೊತ್ತು. ಪಾರ್ಟಿ ಬಿಡುವ ಬಗ್ಗೆಯೂ ಅವರೆಲ್ಲರೂ ಚರ್ಚೆ ಮಾಡಿದ್ದಾರೆ. ಅದು ಕೂಡ ನನಗೆ ಗೊತ್ತು. ಹೋಗುವವರು ಹೋಗಬಹುದು. ಹೊಸ ಯುವಕರು ಪಾರ್ಟಿಗೆ ಬರುತ್ತಾರೆ ಎಂದರು.

ಶಾಸಕ ಜಿ.ಟಿ. ದೇವೇಗೌಡರ ಹೆಸರು ನನ್ನ ಬಳಿ ಹೇಳಲೇ ಬೇಡಿ. ಅವರ ಬಗ್ಗೆ ನಾನು ಮಾತನಾಡಲ್ಲ.ಎಚ್.ಡಿ. ರೇವಣ್ಣ ಜೊತೆ ಚರ್ಚೆ ಮಾಡಿದ್ದಾರೆ. ಆದರೆ, ಪಕ್ಷದಲ್ಲಿ ಅಂತಿಮ ತೀರ್ಮಾನ ಮಾಡುವುದು ನಾನೇ. ಕಾರ್ಯಕರ್ತರ ಅಭಿಪ್ರಾಯವೇ ನನಗೆ ಮುಖ್ಯ.ಮೂರು ಬಾರಿ ನನಗೆ ಅನುಭವವಾಗಿದೆ. ೨೦೦೬ ೨೦೧೩ ೨೦೧೮ ಎಲ್ಲಾ ಕಡೆ ಏನೇನು ಮಾಡಿದ್ದಾರೆ ನೋಡಿದ್ದೇನೆ. ಯಾರು ಎಷ್ಟೇ ಒತ್ತಡ ಹಾಕಿದರೂ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ದೇವೇಗೌಡರ ವಿರುದ್ಧ ಪರೋಕ್ಷ ಕಿಡಿಕಾರಿದರು.ಶಾಸಕ ಜಿ.ಟಿ. ದೇವೇಗೌಡ ಅವರ ಹೆಸರು ಪ್ರಸ್ತಾಪಿಸುತ್ತಿದ್ದಂತೆಯೇ ತೀವ್ರ ಅಸಹನೆ ವ್ಯಕ್ತಪಡಿಸಿದ ಕೇಂದ್ರ ಸಚಿವರು ನನ್ನ ಮುಂದೆ ಅವರ ಹೆಸರು ಎತ್ತಬೇಡಿ ಎಂದು ಎಂದು ನೇರವಾಗಿಯೇ ಹೇಳಿದರು. ಕಳೆದ ಒಂದೂವರೆ ವರ್ಷದಿಂದಲೂ ಅವರ ಬಗ್ಗೆ ನಾನು ಚಕಾರ ಎತ್ತಿಲ್ಲ. ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕೂಡ ಅವರ ಹೆಸರನ್ನು ನಾನು ಎಲ್ಲಿಯೂ ಪ್ರಸ್ತಾಪಿಸಿಲ್ಲ ಎಂದರು.ಈ ವ್ಯಕ್ತಿ ಏನೆಲ್ಲಾ ಮಾಡಿದ್ದಾರೆ ಎಂದು ನನಗೆ ಗೊತ್ತು. ಮೂರು ಬಾರಿ ನನಗೆ ಇವರಿಂದ ಕಹಿ ಅನುಭವ ಆಗಿದೆ ಎಂದರು.

 

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

18 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

18 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

18 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

18 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

18 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago