ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪದಲ್ಲಿ ನಾಳೆ (ಮೇ.೧೪) ಬೆಳಗ್ಗೆ 11.00 ಕ್ಕೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯದ ಜಿಲ್ಲೆಗಳ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರು ಆದ ಡಾ| ಹೆಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ. ವೆಂಕಟೇಶ್ , ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ತಸ್ವೀರ್ ಸೇಠ್, ಶಾಸಕ ಕೆ. ಹರೀಶ್ ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧೃವನಾರಾಯಣ್ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಿ ಚಕ್ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…