ಮೈಸೂರು

ಪರಿಷತ್‌ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿ ಅಂತಿಮ; ಬಂಡಾಯವಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಮೈಸೂರು: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯವಾಗಿ ಇಂದು (ಮೇ.೧೫) ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್‌ ವತಿಯಿಂದ ಮಂಡ್ಯ ಮೂಲದ ವಿವೇಕಾನಂದ ಅವರಿಗೆ ಬಿ ಫಾರಂ ವಿತರಿಸಲಾಗಿದೆ. ಜೆಡಿಎಸ್‌ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ. ಫಾರಂ ವಿತರಿಸಿ ಗೆದ್ದು ಬರುವಂತೆ ಆಶೀರ್ವಾದ ಮಾಡಿದ್ದಾರೆ.

ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ.ಸಿ ನಿಂಗರಾಜೇಗೌಡ ಅವರ ಹೆಸರು ಘೋಷಿಸಲಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಜೆಡಿಎಸ್‌ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಇದರಿಂದ ಅಸಮಾಧಾನವಾಗೊಂಡಿರುವ ಬಿಜೆಪಿ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ಇಂದು(ಮೇ.೧೫) ಮಧ್ಯಾಹ್ನ ೨ ಗಂಟೆ ವೇಳೆಗೆ ಮೈಸೂರಿನ ಪ್ರಾದೇಶಿಕ ಕಚೇರಿಗೆ ಬೆಂಬಲಿಗರ ಜೊತೆ ಆಗಮಿಸಿ ಬಿ ಫಾರ್ಮ್‌ ಇಲ್ಲದೆ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಬಿಜೆಪಿ ಟಿಕೆಟ್‌ ಘೋಷಿತ ಅಭ್ಯರ್ಥಿ ಡಾ.ಈ.ಸಿ ನಿಂಗರಾಜೇಗೌಡ, ಇಂದು ದಿನ ಚೆನ್ನಾಗಿದೆ ಆಗಾಗಿ ನಾಮಪತ್ರ ಸಲ್ಲಿಸಿದ್ದೇನೆ. ನಾಳೆ ಬೆಳಿಗ್ಗೆ ೧೧ ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿ ಫಾರ್ಮ್‌ ಜತೆ ನಾಮಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ಬಿಜೆಪಿ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ನನ್ನ ಹೆಸರು ಅಂತಿಮಗೊಳಿಸಲಾಗಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ರಾಜ್ಯ ಬಿಜೆಪಿ ನಾಯಕರು ಬೆಂಗಳೂರಿಗೆ ಕರೆದಿದ್ದಾರೆ. ಇಂದು ಸಂಜೆ ತೆರಳುತ್ತಿದ್ದೇನೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ.

ಜೆಡಿಎಸ್‌ಗೂ ಬಂಡಾಯದ ಬಿಸಿ: ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ವಿವೇಕಾನಂದ ಹಾಗೂ ಕೆ.ಟಿ ಶೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕನಂದ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಿಸಿದೆ. ಆದರಿಂದ್ದ ಅಸಮಾಧಾನಗೊಂಡಿರುವ ಕೆ.ಟಿ ಶ್ರೀಕಂಠೆಗೌಡ ಬಂಡಾಯವಾಗಿ ಸ್ಪರ್ಧಿಸಲು ಬಯಸಿದ್ದಾರೆ. ಈ ಬಗ್ಗೆ ಸೋಶೀಯಲ್‌ ಮಿಡಿಯಾದಲ್ಲಿ ಪ್ರತಿಕ್ರಿಯಿಸಿರುವ ಅವರು, ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಮತ್ತೊಮ್ಮೆ ನಿಮ್ಮ ಬಳಿ ಬರುತ್ತಿದ್ದು, ನನ್ನ ಎಲ್ಲಾ ಶಿಕ್ಷಕ ವೃಂದದವರ ಕುಂದು ಕೊರತೆಗಳನ್ನು ಪರಿಷತ್ತಿನಲ್ಲಿಟ್ಟು ಸಮಸ್ಯೆ ಬರೆಹರಿಸುವ ಪ್ರಯತ್ನ ಮಾಡುತ್ತೇನೆ. ನನ್ನುನ್ನು ಬೆಂಬಲಿಸಿ. ನಾಳೆ(ಮೇ.೧೬) ಬೆಳಿಗ್ಗೆ ೧೧ ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.

ಮೈತ್ರಿ ಪಕ್ಷದ ಈ ಬೆಳವಣಿಗೆ ಕಾಂಗ್ರೆಸ್‌ ಪಾಳಯದಲ್ಲಿ ನಗೆಪಾಟಲಿಗೆ ಒಳಗಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿ ಮರಿತಿಬ್ಬೇಗೌಡ ಕಣದಲ್ಲಿದ್ದಾರೆ. ಸತತ ನಾಲ್ಕು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿರುವ ಮರಿತಿಬ್ಬೇಗೌಡರು ಈಗ ಐದನೇ ಬಾರಿಗೆ ಕಣಕ್ಕಿಳಿದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

6 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

7 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

7 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

8 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

8 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

11 hours ago