ಮೈಸೂರು: ಐನ್ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಕಾವೇರಿ ಬಿಟ್ಟುಕೊಟ್ಟು ಇಂಡಿಯಾ ಮಿತ್ರ ಬಣ ಮೆಚ್ಚಿಸಲು ಕಾಂಗ್ರೆಸ್ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಬರ ಬಂದಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೇ ತಮಿಳುನಾಡಿಗೆ ಕಾವೇರಿ ಹರಿಸಲು ಎಲ್ಲಿಂದ ನೀರು ಬಂದು ಎಂದು ಪ್ರಶ್ನಿಸಿದ್ದಾರೆ.
ದೊಡ್ಡ ಗೌಡರು ಕಾವೇರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದವರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಇವರ ಬಗ್ಗ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಇದಕ್ಕೆಲ್ಲಾ ಮತದಾರ ಪ್ರಭುಗಳು ಉತ್ತರ ನೀಡಲಿದ್ದಾರೆ ಎಂದರು.
ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಜನರಿಂದ ಸಕಾರಾತ್ಮಕ ಸ್ಪಂದನೆ ಬರುತ್ತಿದ್ದು, ಮೈತ್ರಿ ಅಭ್ಯರ್ಥಿ ಪರವಾದ ಅಲೆ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಜವಂಶಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕೆ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…