ಮೈಸೂರು: ಐನ್ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಕಾವೇರಿ ಬಿಟ್ಟುಕೊಟ್ಟು ಇಂಡಿಯಾ ಮಿತ್ರ ಬಣ ಮೆಚ್ಚಿಸಲು ಕಾಂಗ್ರೆಸ್ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಬರ ಬಂದಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೇ ತಮಿಳುನಾಡಿಗೆ ಕಾವೇರಿ ಹರಿಸಲು ಎಲ್ಲಿಂದ ನೀರು ಬಂದು ಎಂದು ಪ್ರಶ್ನಿಸಿದ್ದಾರೆ.
ದೊಡ್ಡ ಗೌಡರು ಕಾವೇರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದವರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಇವರ ಬಗ್ಗ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಇದಕ್ಕೆಲ್ಲಾ ಮತದಾರ ಪ್ರಭುಗಳು ಉತ್ತರ ನೀಡಲಿದ್ದಾರೆ ಎಂದರು.
ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಜನರಿಂದ ಸಕಾರಾತ್ಮಕ ಸ್ಪಂದನೆ ಬರುತ್ತಿದ್ದು, ಮೈತ್ರಿ ಅಭ್ಯರ್ಥಿ ಪರವಾದ ಅಲೆ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಜವಂಶಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕೆ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…