mysuru caste census siddaramaiah
ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್ ಸಿಂಹಗೆ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ಖುರ್ಚಿಗೆ ಯಾವುದೇ ಅಪಾಯ ಇಲ್ಲ. ಅವರ ಹಿಂದೆ ಹೈ ಕಮಾಂಡ್ ಇದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ ಬಿಡುಗಡೆ ಮಾಡೋದಾಗಿ ಹೇಳಿದ್ದೇವೆ. ಈ ಮಾತಿನಂತೆ ಜಾತಿಗಣತಿ ವಿಚಾರವಾಗಿ ದ್ವನಿ ಎತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:- ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಹೆಚ್ಚಿಗೆ ಸಿಗತ್ತೆ. ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗತ್ತೆ ಎಂದು ಭರವಸೆ ನೀಡಿದರು.
ಕೃತ್ಯ ಎಸಗಿದವರ ಬಂಧನಕ್ಕೆ ಸೂಚನೆ
ಇನ್ನೂ ವರುಣಾ ವ್ಯಾಪ್ತಿಯ ವಾಜಮಂಗಳದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗ್ರಾಮದಲ್ಲಿ ಸಭೆ ಮಾಡಿ ಕೃತ್ಯ ಎಸಗಿದವರನ್ನು ಬಂಧಿಸಿ ಎಂದು ಸೂಚನೆ ನೀಡಿದ್ದೇನೆ.
ಪೊಲೀಸರು ಕೆಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಯಾರೇ ತಪ್ಪು ಮಾಡಿದ್ರು ಕೂಡ ಶಿಕ್ಷೆ ಆಗುತ್ತದೆ ಎಂದು ಹೇಳಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…