ಮೈಸೂರು

ನೂತನ ಶೌಚಾಲಯ ಸ್ವಾಗತಕ್ಕೆ ಮ-ನರೇಗಾ ನೆರವು

ಮೈಸೂರು : ಜಿಲ್ಲೆಯೆಲ್ಲೆಡೆ ಅಂಗನವಾಡಿ ಹಾಗೂ ಶಾಲೆಗಳು ತೆರೆದುಕೊಂಡ ಈ ಹೊತ್ತಲ್ಲಿ ಅಲ್ಲೊಂದು ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ನೂತನ ಶೌಚಾಲಯಗಳೊಂದಿಗೆ ಚಿಣ್ಣರನ್ನು ಬರ ಮಾಡಿಕೊಂಡಿದ್ದು, ಇದಕ್ಕೆ ನರೇಗಾ ನೆರವಾಗಿ ನಿಂತಿದೆ.

ಹೌದು, ಮಹಾತ್ಮಗಾಂಧಿಯವರ ಕನಸಿನಂತೆ ಅಭಿವೃದ್ಧಿ ಎಂಬುದು ಗ್ರಾಮಗಳಿಂದಲೇ ಆಗಬೇಕೆಂಬ ಪರಿಕಲ್ಪನೆಯಲ್ಲೇ ಮುಂದೆ ಸಾಗುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಶಾಲೆಗಳ ಅಭಿವೃದ್ಧಿಯ ನೆರವಿಗೆ ಸಹಕಾರಿಯಾಗಿದೆ. ಇಂತಹದೊಂದು ಪ್ರಯತ್ನ ಯಶಸ್ವಿಯಾಗಿರುವುದು ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮಲಿಯೂರು ಗ್ರಾಮ ಪಂಚಾಯಿತಿಯ ಮೇಗಳಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಿದೆ.

ಇದನ್ನೂ ಓದಿ: ಮ-ನರೇಗಾ ಯೋಜನೆ ; ಶೇ.102 ರ ಗುರಿ ಸಾಧಿಸಿದ ಮಂಡ್ಯ

ದುಸ್ಥಿತಿಯಲ್ಲಿದ್ದ ಶೌಚಾಲಯ: ಹಲವು ವರ್ಷಗಳಿಂದ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಿದ್ದು, 15 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಶೌಚಾಲಯ, ಪ್ರಸ್ತುತ ಬಳಕೆಗೆ ಯೋಗ್ಯವಾಗಿರಲಿಲ್ಲ, ಅಲ್ಲದೇ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯ ಇರಲಿಲ್ಲ, ಮಕ್ಕಳು ಬಳಸಲು ಕಷ್ಟ ಸಾಧ್ಯವಾಗಿತ್ತು. ಇದನ್ನು ಅರಿತ ಮುಖ್ಯೋಪಾಧ್ಯಾಯರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಗಮನಕ್ಕೆ ತಂದು ಶೌಚಾಲಯ ನಿರ್ಮಾಣಕ್ಕೆ ಮುಂದಡಿಯಿಟ್ಟರು.

ಇದರ ಪ್ರತಿಫಲದ ಫಲವಾಗಿ 2023-24ನೇ ಸಾಲಿನಲ್ಲಿ 5.20 ಲಕ್ಷ ರೂ.ಗಳ ಕ್ರಿಯಾ ಯೋಜನೆ ಸಿದ್ದಪಡಿಸಿ ಪುರುಷ ಹಾಗೂ ಹೆಣ್ಣು ಮಕ್ಕಳ ಸುಸಜ್ಜಿತ ಶೌಚಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿದರು.

ಇದರ ಪ್ರತಿಫಲವಾಗಿ 2024-25ನೇ ಸಾಲಿಗೆ ಕಾಮಗಾರಿ ಪೂರ್ಣಗೊಂಡು, ಈ ಸಾಲಿನಲ್ಲಿ ಆಗಮಿಸಿದ ಚಿಣ್ಣರು, ಮಕ್ಕಳನ್ನು ನೂತನ ಶೌಚಾಲಯಗಳು ಸಂತಸದಿಂದ ಸ್ವಾಗತಿಸಿದೆ.

ನೂತನ ಶೌಚ ಕಂಡ ಮಕ್ಕಳು ಸಂತಸದಿಂದಲೇ ನಮ್ಮ ಶಾಲೆ ಯಾವುದಕ್ಕೂ ಕಮ್ಮಿ ಇಲ್ಲ ಎಂಬಂತೆ ಸಂಭ್ರಮಿಸುವ ಮೂಲಕ ಮ-ನರೇಗಾ ಯೋಜನೆ ಅನುಷ್ಠಾನದ ಸದ್ದಿಲ್ಲದೆ ತನ್ನ ಸಾಧನೆ ಮಾಡಿ ತೋರಿಸಿದೆ.

ಸರ್ಕಾರಿ ಶಾಲೆಗಳತ್ತ ಮಕ್ಕಳು ಬರುವುದಿಲ್ಲ ಎನ್ನುವ ನಾವು ಮೊದಲು ಶಾಲೆಯಲ್ಲಿ ಮಕ್ಕಳಿಗೆ ಖಾಸಗಿ ಶಾಲೆಯ ಮಾದರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಮ-ನರೇಗಾ ನಮ್ಮ ಶಾಲ್ಲೆಯಲ್ಲಿ 30 ಮಂದಿ ಮಕ್ಕಳಿದ್ದು, ಈಗ ಶೌಚಾಲಯದಲ್ಲಿ ಹೊಸ ಹೆಜ್ಜೆ ಇರಿಸಿರುವುದು ಸಂತಸ ತರಿಸಿದೆ. – ರಾಮು, ಶಾಲಾ ಮುಖ್ಯಶಿಕ್ಷಕ, ಸ.ಕಿ.ಪ್ರಾ.ಶಾಲೆ, ಮೇಗಳಕೊಪ್ಪಲು ಗ್ರಾಮ.

ಶಾಲಾ ಮುಖ್ಯ ಶಿಕ್ಷಕಿಯವರು ಇಂತಹದೊಂದು ಸಮಸ್ಯೆ ತಿಳಿಸಿದಾಗ ಬಳಿಕ ಮ-ನರೇಗಾ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಟ್ಟು ಅದರಿಂದ ಕಾಮಗಾರಿ ಪ್ರಾರಂಭಿಸಿ ಈಗ ಮಕ್ಕಳಿಗೆ ಹೊಸ ಶೌಚಾಲಯ ಲಭ್ಯಕ್ಕೆ ಸಿಕ್ಕಿರುವುದರಿಂದ ಎಲ್ಲರಿಗೂ ಖುಷಿಯಾಗಿದೆ. ಶಾಲಾ ಶೌಚಾಲಯ, ಕಾಂಪೌಂಡ್ ಹಾಗೂ ಕಟ್ಟಡದಲ್ಲಿಯೂ ನರೇಗಾ ಅನುದಾನ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿ ಸಾಧಿಸಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ.

– ಅನಂತರಾಜು ಪಿ.ಎಸ್., ಕಾರ್ಯ ನಿರ್ವಾಹಕ ಅಧಿಕಾರಿ, ತಿ.ನರಸೀಪುರ ತಾಲ್ಲೂಕು

ಜಿಲ್ಲೆಯಲ್ಲಿ ಮ-ನರೇಗಾ ಕಾರ್ಯ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಅದರಲ್ಲೂ ಅನೇಕ ಶಾಲೆಗಳಲ್ಲಿ ಕಟ್ಟಡ ಸಮಸ್ಯೆಗಳಿದ್ದು, ನರೇಗಾ ಮೂಲಕ ಅವುಗಳ ನಿವಾರಿಸಿಕೊಳ್ಳಲು ಆಯಾ ಶಿಕ್ಷಕರು ಹಾಗೂ ಪಂಚಾಯಿತಿ ಅಧಿಕಾರಿಗಳು ಮುಂದೆ ಬಂದರೆ ಸರ್ಕಾರಿ ಶಾಲೆಗಳ ತಾನಾಗಿಯೇ ಅಭಿವೃದ್ಧಿ ಕಾಣಲಿವೆ. ಇಂತಹ ಅಭಿವೃದ್ಧಿ ಕಾರ್ಯಕ್ಕೆ ಮ-ನರೇಗಾ ಯೋಜನೆ ಮುಕ್ತವಾಗಿದೆ.

-ಎಸ್. ಯುಕೇಶ್ ಕುಮಾರ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ , ಮೈಸೂರು.

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

2 hours ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

2 hours ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

2 hours ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

3 hours ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

3 hours ago