ಮೈಸೂರು

ನೂತನ ಶೌಚಾಲಯ ಸ್ವಾಗತಕ್ಕೆ ಮ-ನರೇಗಾ ನೆರವು

ಮೈಸೂರು : ಜಿಲ್ಲೆಯೆಲ್ಲೆಡೆ ಅಂಗನವಾಡಿ ಹಾಗೂ ಶಾಲೆಗಳು ತೆರೆದುಕೊಂಡ ಈ ಹೊತ್ತಲ್ಲಿ ಅಲ್ಲೊಂದು ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ನೂತನ ಶೌಚಾಲಯಗಳೊಂದಿಗೆ ಚಿಣ್ಣರನ್ನು ಬರ ಮಾಡಿಕೊಂಡಿದ್ದು, ಇದಕ್ಕೆ ನರೇಗಾ ನೆರವಾಗಿ ನಿಂತಿದೆ.

ಹೌದು, ಮಹಾತ್ಮಗಾಂಧಿಯವರ ಕನಸಿನಂತೆ ಅಭಿವೃದ್ಧಿ ಎಂಬುದು ಗ್ರಾಮಗಳಿಂದಲೇ ಆಗಬೇಕೆಂಬ ಪರಿಕಲ್ಪನೆಯಲ್ಲೇ ಮುಂದೆ ಸಾಗುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಶಾಲೆಗಳ ಅಭಿವೃದ್ಧಿಯ ನೆರವಿಗೆ ಸಹಕಾರಿಯಾಗಿದೆ. ಇಂತಹದೊಂದು ಪ್ರಯತ್ನ ಯಶಸ್ವಿಯಾಗಿರುವುದು ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮಲಿಯೂರು ಗ್ರಾಮ ಪಂಚಾಯಿತಿಯ ಮೇಗಳಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಿದೆ.

ಇದನ್ನೂ ಓದಿ: ಮ-ನರೇಗಾ ಯೋಜನೆ ; ಶೇ.102 ರ ಗುರಿ ಸಾಧಿಸಿದ ಮಂಡ್ಯ

ದುಸ್ಥಿತಿಯಲ್ಲಿದ್ದ ಶೌಚಾಲಯ: ಹಲವು ವರ್ಷಗಳಿಂದ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಿದ್ದು, 15 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಶೌಚಾಲಯ, ಪ್ರಸ್ತುತ ಬಳಕೆಗೆ ಯೋಗ್ಯವಾಗಿರಲಿಲ್ಲ, ಅಲ್ಲದೇ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯ ಇರಲಿಲ್ಲ, ಮಕ್ಕಳು ಬಳಸಲು ಕಷ್ಟ ಸಾಧ್ಯವಾಗಿತ್ತು. ಇದನ್ನು ಅರಿತ ಮುಖ್ಯೋಪಾಧ್ಯಾಯರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಗಮನಕ್ಕೆ ತಂದು ಶೌಚಾಲಯ ನಿರ್ಮಾಣಕ್ಕೆ ಮುಂದಡಿಯಿಟ್ಟರು.

ಇದರ ಪ್ರತಿಫಲದ ಫಲವಾಗಿ 2023-24ನೇ ಸಾಲಿನಲ್ಲಿ 5.20 ಲಕ್ಷ ರೂ.ಗಳ ಕ್ರಿಯಾ ಯೋಜನೆ ಸಿದ್ದಪಡಿಸಿ ಪುರುಷ ಹಾಗೂ ಹೆಣ್ಣು ಮಕ್ಕಳ ಸುಸಜ್ಜಿತ ಶೌಚಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿದರು.

ಇದರ ಪ್ರತಿಫಲವಾಗಿ 2024-25ನೇ ಸಾಲಿಗೆ ಕಾಮಗಾರಿ ಪೂರ್ಣಗೊಂಡು, ಈ ಸಾಲಿನಲ್ಲಿ ಆಗಮಿಸಿದ ಚಿಣ್ಣರು, ಮಕ್ಕಳನ್ನು ನೂತನ ಶೌಚಾಲಯಗಳು ಸಂತಸದಿಂದ ಸ್ವಾಗತಿಸಿದೆ.

ನೂತನ ಶೌಚ ಕಂಡ ಮಕ್ಕಳು ಸಂತಸದಿಂದಲೇ ನಮ್ಮ ಶಾಲೆ ಯಾವುದಕ್ಕೂ ಕಮ್ಮಿ ಇಲ್ಲ ಎಂಬಂತೆ ಸಂಭ್ರಮಿಸುವ ಮೂಲಕ ಮ-ನರೇಗಾ ಯೋಜನೆ ಅನುಷ್ಠಾನದ ಸದ್ದಿಲ್ಲದೆ ತನ್ನ ಸಾಧನೆ ಮಾಡಿ ತೋರಿಸಿದೆ.

ಸರ್ಕಾರಿ ಶಾಲೆಗಳತ್ತ ಮಕ್ಕಳು ಬರುವುದಿಲ್ಲ ಎನ್ನುವ ನಾವು ಮೊದಲು ಶಾಲೆಯಲ್ಲಿ ಮಕ್ಕಳಿಗೆ ಖಾಸಗಿ ಶಾಲೆಯ ಮಾದರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಮ-ನರೇಗಾ ನಮ್ಮ ಶಾಲ್ಲೆಯಲ್ಲಿ 30 ಮಂದಿ ಮಕ್ಕಳಿದ್ದು, ಈಗ ಶೌಚಾಲಯದಲ್ಲಿ ಹೊಸ ಹೆಜ್ಜೆ ಇರಿಸಿರುವುದು ಸಂತಸ ತರಿಸಿದೆ. – ರಾಮು, ಶಾಲಾ ಮುಖ್ಯಶಿಕ್ಷಕ, ಸ.ಕಿ.ಪ್ರಾ.ಶಾಲೆ, ಮೇಗಳಕೊಪ್ಪಲು ಗ್ರಾಮ.

ಶಾಲಾ ಮುಖ್ಯ ಶಿಕ್ಷಕಿಯವರು ಇಂತಹದೊಂದು ಸಮಸ್ಯೆ ತಿಳಿಸಿದಾಗ ಬಳಿಕ ಮ-ನರೇಗಾ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಟ್ಟು ಅದರಿಂದ ಕಾಮಗಾರಿ ಪ್ರಾರಂಭಿಸಿ ಈಗ ಮಕ್ಕಳಿಗೆ ಹೊಸ ಶೌಚಾಲಯ ಲಭ್ಯಕ್ಕೆ ಸಿಕ್ಕಿರುವುದರಿಂದ ಎಲ್ಲರಿಗೂ ಖುಷಿಯಾಗಿದೆ. ಶಾಲಾ ಶೌಚಾಲಯ, ಕಾಂಪೌಂಡ್ ಹಾಗೂ ಕಟ್ಟಡದಲ್ಲಿಯೂ ನರೇಗಾ ಅನುದಾನ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿ ಸಾಧಿಸಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ.

– ಅನಂತರಾಜು ಪಿ.ಎಸ್., ಕಾರ್ಯ ನಿರ್ವಾಹಕ ಅಧಿಕಾರಿ, ತಿ.ನರಸೀಪುರ ತಾಲ್ಲೂಕು

ಜಿಲ್ಲೆಯಲ್ಲಿ ಮ-ನರೇಗಾ ಕಾರ್ಯ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಅದರಲ್ಲೂ ಅನೇಕ ಶಾಲೆಗಳಲ್ಲಿ ಕಟ್ಟಡ ಸಮಸ್ಯೆಗಳಿದ್ದು, ನರೇಗಾ ಮೂಲಕ ಅವುಗಳ ನಿವಾರಿಸಿಕೊಳ್ಳಲು ಆಯಾ ಶಿಕ್ಷಕರು ಹಾಗೂ ಪಂಚಾಯಿತಿ ಅಧಿಕಾರಿಗಳು ಮುಂದೆ ಬಂದರೆ ಸರ್ಕಾರಿ ಶಾಲೆಗಳ ತಾನಾಗಿಯೇ ಅಭಿವೃದ್ಧಿ ಕಾಣಲಿವೆ. ಇಂತಹ ಅಭಿವೃದ್ಧಿ ಕಾರ್ಯಕ್ಕೆ ಮ-ನರೇಗಾ ಯೋಜನೆ ಮುಕ್ತವಾಗಿದೆ.

-ಎಸ್. ಯುಕೇಶ್ ಕುಮಾರ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ , ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

3 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

4 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

31 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

35 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

56 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

1 hour ago