ಮೈಸೂರು

ನೂತನ ಶೌಚಾಲಯ ಸ್ವಾಗತಕ್ಕೆ ಮ-ನರೇಗಾ ನೆರವು

ಮೈಸೂರು : ಜಿಲ್ಲೆಯೆಲ್ಲೆಡೆ ಅಂಗನವಾಡಿ ಹಾಗೂ ಶಾಲೆಗಳು ತೆರೆದುಕೊಂಡ ಈ ಹೊತ್ತಲ್ಲಿ ಅಲ್ಲೊಂದು ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ನೂತನ ಶೌಚಾಲಯಗಳೊಂದಿಗೆ ಚಿಣ್ಣರನ್ನು ಬರ ಮಾಡಿಕೊಂಡಿದ್ದು, ಇದಕ್ಕೆ ನರೇಗಾ ನೆರವಾಗಿ ನಿಂತಿದೆ.

ಹೌದು, ಮಹಾತ್ಮಗಾಂಧಿಯವರ ಕನಸಿನಂತೆ ಅಭಿವೃದ್ಧಿ ಎಂಬುದು ಗ್ರಾಮಗಳಿಂದಲೇ ಆಗಬೇಕೆಂಬ ಪರಿಕಲ್ಪನೆಯಲ್ಲೇ ಮುಂದೆ ಸಾಗುತ್ತಿರುವ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಶಾಲೆಗಳ ಅಭಿವೃದ್ಧಿಯ ನೆರವಿಗೆ ಸಹಕಾರಿಯಾಗಿದೆ. ಇಂತಹದೊಂದು ಪ್ರಯತ್ನ ಯಶಸ್ವಿಯಾಗಿರುವುದು ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮಲಿಯೂರು ಗ್ರಾಮ ಪಂಚಾಯಿತಿಯ ಮೇಗಳಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಿದೆ.

ಇದನ್ನೂ ಓದಿ: ಮ-ನರೇಗಾ ಯೋಜನೆ ; ಶೇ.102 ರ ಗುರಿ ಸಾಧಿಸಿದ ಮಂಡ್ಯ

ದುಸ್ಥಿತಿಯಲ್ಲಿದ್ದ ಶೌಚಾಲಯ: ಹಲವು ವರ್ಷಗಳಿಂದ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಿದ್ದು, 15 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಶೌಚಾಲಯ, ಪ್ರಸ್ತುತ ಬಳಕೆಗೆ ಯೋಗ್ಯವಾಗಿರಲಿಲ್ಲ, ಅಲ್ಲದೇ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯ ಇರಲಿಲ್ಲ, ಮಕ್ಕಳು ಬಳಸಲು ಕಷ್ಟ ಸಾಧ್ಯವಾಗಿತ್ತು. ಇದನ್ನು ಅರಿತ ಮುಖ್ಯೋಪಾಧ್ಯಾಯರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಗಮನಕ್ಕೆ ತಂದು ಶೌಚಾಲಯ ನಿರ್ಮಾಣಕ್ಕೆ ಮುಂದಡಿಯಿಟ್ಟರು.

ಇದರ ಪ್ರತಿಫಲದ ಫಲವಾಗಿ 2023-24ನೇ ಸಾಲಿನಲ್ಲಿ 5.20 ಲಕ್ಷ ರೂ.ಗಳ ಕ್ರಿಯಾ ಯೋಜನೆ ಸಿದ್ದಪಡಿಸಿ ಪುರುಷ ಹಾಗೂ ಹೆಣ್ಣು ಮಕ್ಕಳ ಸುಸಜ್ಜಿತ ಶೌಚಾಲಯಗಳ ನಿರ್ಮಾಣಕ್ಕೆ ಚಾಲನೆ ನೀಡಿದರು.

ಇದರ ಪ್ರತಿಫಲವಾಗಿ 2024-25ನೇ ಸಾಲಿಗೆ ಕಾಮಗಾರಿ ಪೂರ್ಣಗೊಂಡು, ಈ ಸಾಲಿನಲ್ಲಿ ಆಗಮಿಸಿದ ಚಿಣ್ಣರು, ಮಕ್ಕಳನ್ನು ನೂತನ ಶೌಚಾಲಯಗಳು ಸಂತಸದಿಂದ ಸ್ವಾಗತಿಸಿದೆ.

ನೂತನ ಶೌಚ ಕಂಡ ಮಕ್ಕಳು ಸಂತಸದಿಂದಲೇ ನಮ್ಮ ಶಾಲೆ ಯಾವುದಕ್ಕೂ ಕಮ್ಮಿ ಇಲ್ಲ ಎಂಬಂತೆ ಸಂಭ್ರಮಿಸುವ ಮೂಲಕ ಮ-ನರೇಗಾ ಯೋಜನೆ ಅನುಷ್ಠಾನದ ಸದ್ದಿಲ್ಲದೆ ತನ್ನ ಸಾಧನೆ ಮಾಡಿ ತೋರಿಸಿದೆ.

ಸರ್ಕಾರಿ ಶಾಲೆಗಳತ್ತ ಮಕ್ಕಳು ಬರುವುದಿಲ್ಲ ಎನ್ನುವ ನಾವು ಮೊದಲು ಶಾಲೆಯಲ್ಲಿ ಮಕ್ಕಳಿಗೆ ಖಾಸಗಿ ಶಾಲೆಯ ಮಾದರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ಮ-ನರೇಗಾ ನಮ್ಮ ಶಾಲ್ಲೆಯಲ್ಲಿ 30 ಮಂದಿ ಮಕ್ಕಳಿದ್ದು, ಈಗ ಶೌಚಾಲಯದಲ್ಲಿ ಹೊಸ ಹೆಜ್ಜೆ ಇರಿಸಿರುವುದು ಸಂತಸ ತರಿಸಿದೆ. – ರಾಮು, ಶಾಲಾ ಮುಖ್ಯಶಿಕ್ಷಕ, ಸ.ಕಿ.ಪ್ರಾ.ಶಾಲೆ, ಮೇಗಳಕೊಪ್ಪಲು ಗ್ರಾಮ.

ಶಾಲಾ ಮುಖ್ಯ ಶಿಕ್ಷಕಿಯವರು ಇಂತಹದೊಂದು ಸಮಸ್ಯೆ ತಿಳಿಸಿದಾಗ ಬಳಿಕ ಮ-ನರೇಗಾ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಟ್ಟು ಅದರಿಂದ ಕಾಮಗಾರಿ ಪ್ರಾರಂಭಿಸಿ ಈಗ ಮಕ್ಕಳಿಗೆ ಹೊಸ ಶೌಚಾಲಯ ಲಭ್ಯಕ್ಕೆ ಸಿಕ್ಕಿರುವುದರಿಂದ ಎಲ್ಲರಿಗೂ ಖುಷಿಯಾಗಿದೆ. ಶಾಲಾ ಶೌಚಾಲಯ, ಕಾಂಪೌಂಡ್ ಹಾಗೂ ಕಟ್ಟಡದಲ್ಲಿಯೂ ನರೇಗಾ ಅನುದಾನ ಬಳಕೆ ಮಾಡಿಕೊಂಡು ಶಾಲೆಗಳ ಅಭಿವೃದ್ಧಿ ಸಾಧಿಸಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ.

– ಅನಂತರಾಜು ಪಿ.ಎಸ್., ಕಾರ್ಯ ನಿರ್ವಾಹಕ ಅಧಿಕಾರಿ, ತಿ.ನರಸೀಪುರ ತಾಲ್ಲೂಕು

ಜಿಲ್ಲೆಯಲ್ಲಿ ಮ-ನರೇಗಾ ಕಾರ್ಯ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಅದರಲ್ಲೂ ಅನೇಕ ಶಾಲೆಗಳಲ್ಲಿ ಕಟ್ಟಡ ಸಮಸ್ಯೆಗಳಿದ್ದು, ನರೇಗಾ ಮೂಲಕ ಅವುಗಳ ನಿವಾರಿಸಿಕೊಳ್ಳಲು ಆಯಾ ಶಿಕ್ಷಕರು ಹಾಗೂ ಪಂಚಾಯಿತಿ ಅಧಿಕಾರಿಗಳು ಮುಂದೆ ಬಂದರೆ ಸರ್ಕಾರಿ ಶಾಲೆಗಳ ತಾನಾಗಿಯೇ ಅಭಿವೃದ್ಧಿ ಕಾಣಲಿವೆ. ಇಂತಹ ಅಭಿವೃದ್ಧಿ ಕಾರ್ಯಕ್ಕೆ ಮ-ನರೇಗಾ ಯೋಜನೆ ಮುಕ್ತವಾಗಿದೆ.

-ಎಸ್. ಯುಕೇಶ್ ಕುಮಾರ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ , ಮೈಸೂರು.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

7 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

7 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

7 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

7 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

7 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

7 hours ago