ಮೈಸೂರು

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ ನಿಯಮಗಳನ್ನು ಬದಲಿಸಿ ಮಸೂದೆ ಜಾರಿಗೊಳಿಸಿರುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ವಾರವೂ ಸಹ ಕೂಲಿ ಕಾರ್ಮಿಕರಿಗೆ ಸಂಬಳ ಹೋಗಲಿದೆ. ಹಿಂದೆ ಕಾಮಗಾರಿ ಬಳಿಕ ಕೊಡುತ್ತಿದ್ದರು. ಈಗ ಅದು ಬದಲಾಗಿದೆ ಎಂದರು.

ಕೃಷಿ ಚಟುವಟಿಕೆ ಸಂದರ್ಭದಲ್ಲಿ ಮೈದಾನದ ಕೆಲಸ ಬಿಟ್ಟು ಹೋಗಬಹುದು. ಜತೆಗೆ ತಂತ್ರಜ್ಞಾನಕ್ಕೆ ಅನುಗುಣವಾಗಿ ಮಸೂದೆಯನ್ನು ಅನುಷ್ಠಾನ ಮಾಡಿದ್ದಾರೆ. ಇದರಿಂದ ಅನೂಕೂಲ ಆಗಲಿದೆ. ಕಾಂಗ್ರೆಸ್ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ನಮ್ಮ ಕಾಲಕ್ಕೆ ಏನೂ ಮಾಡಬೇಕೋ ಅದನ್ನು ಮಾಡಿದ್ದೇವೆ. ಇದು ಹೊಸ ಯೋಜನೆ, ಹೊಸ ಭಾರತಕ್ಕೆ ಅನೂಕೂಲವಾಗುವ ಮಸೂದೆಯಾಗಿದೆ ಎಂದು ಹೇಳಿದರು.

ಎಲ್ಲಾ ಕೆಲಸದಲ್ಲಿಯೂ ಮಹಾತ್ಮ ಗಾಂಧಿ ಆದರ್ಶಗಳು ಇವೆ:
ಮಹಾತ್ಮ ಗಾಂಽ ಎಲ್ಲರ ಹೃದಯದಲ್ಲೂ ಸದಾ ಇರುವ ವ್ಯಕ್ತಿಯಾಗಿದ್ದಾರೆ. ಎಲ್ಲಾ ಕೆಲಸದಲ್ಲಿಯೂ ಅವರ ಆದರ್ಶಗಳು ಇವೆ ಎಂಬುದು ನಮ್ಮ ನಂಬಿಕೆಯಾಗಿದೆ. ಪಿಎಂ ಆವಾಸ್, ಜಲಜೀವವ್?ನಲ್ಲಿ ಅವರ ಆದರ್ಶಗಳಿವೆ. ಪಿಎಂ ಮುದ್ರಾ ಯೋಜನೆ ಸೇರಿ ಅನೇಕ ಯೋಜನೆಗಳಲ್ಲಿ ಅವರ ಆದರ್ಶಗಳಿವೆ. ವಿಕಸಿತ ಭಾರತದ ಗುರಿಯೇ ಗಾಂಽಯವರ ಆದರ್ಶದೊಂದಿಗೆ ನಡೆಯುತ್ತಿರುವುದಾಗಿದೆ ಎಂದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ನಿರಂತರವಾಗಿ ನಮ್ಮ ಬೇಡಿಕೆಯಿದೆ. ವಿಕಸಿತ ಭಾರತದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ನಿರಂತರ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಅದರಲ್ಲೂ ಕುಶಾಲನಗರ ಹೆದ್ದಾರಿ ಮಾಡಲೂ ಏನೆಲ್ಲಾ ಅನುಮತಿ ಬೇಕೋ ಎಲ್ಲವನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಮಾರ್ಚ್ ೨೦೨೭ರೊಳಗೆ ರಸ್ತೆ ಪೂರ್ಣಗೊಳಿಸಲಿದ್ದೇವೆ. ಒಂದೆರಡು ವಾರಗಳಲ್ಲಿ ಕೇಂದ್ರಕ್ಕೆ ಭೂಮಿ ಹಸ್ತಾಂತರ ಪ್ರಕ್ರಿಯೆಯೂ ಪೂರ್ಣಗೊಳ್ಳುವ ಮೂಲಕ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಕಾರ್ಯ ಚುರುಕಾಗಲಿದೆ. ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್ )ನಲ್ಲಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥಾನವನ್ನು ಪ್ರತ್ಯೇಕಗೊಳಿಸಿ ಅಭಿವೃದ್ಧಿ ಮಾಡುವ ಬಗ್ಗೆಯೂ ಕ್ರಮವಹಿಸಲಾಗಿದೆ ಎಂದರು.

ಮೈಸೂರಿನಲ್ಲಿಯೂ ಇಕೋ ಟೂರಿಸಂ ಜೋನ್ ಅಡಿ ಮೃಗಾಲಯದ ಸಮೀಪದ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ತಂದಿದ್ದೇವೆ. ಟಾಂಗಾ ಮೂಲಕ ಮೈಸೂರನ್ನು ನೋಡುವುದು ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯ ಮಾಡುವುದಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

7 mins ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

13 mins ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

17 mins ago

ಓದುಗರ ಪತ್ರ:  ವರುಣ ನಾಲೆಗೆ ತಡೆಗೋಡೆ ನಿರ್ಮಿಸಿ

ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…

18 mins ago

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

21 mins ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

1 hour ago