ಮೈಸೂರು

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ ನಿಯಮಗಳನ್ನು ಬದಲಿಸಿ ಮಸೂದೆ ಜಾರಿಗೊಳಿಸಿರುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರತಿ ವಾರವೂ ಸಹ ಕೂಲಿ ಕಾರ್ಮಿಕರಿಗೆ ಸಂಬಳ ಹೋಗಲಿದೆ. ಹಿಂದೆ ಕಾಮಗಾರಿ ಬಳಿಕ ಕೊಡುತ್ತಿದ್ದರು. ಈಗ ಅದು ಬದಲಾಗಿದೆ ಎಂದರು.

ಕೃಷಿ ಚಟುವಟಿಕೆ ಸಂದರ್ಭದಲ್ಲಿ ಮೈದಾನದ ಕೆಲಸ ಬಿಟ್ಟು ಹೋಗಬಹುದು. ಜತೆಗೆ ತಂತ್ರಜ್ಞಾನಕ್ಕೆ ಅನುಗುಣವಾಗಿ ಮಸೂದೆಯನ್ನು ಅನುಷ್ಠಾನ ಮಾಡಿದ್ದಾರೆ. ಇದರಿಂದ ಅನೂಕೂಲ ಆಗಲಿದೆ. ಕಾಂಗ್ರೆಸ್ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ನಮ್ಮ ಕಾಲಕ್ಕೆ ಏನೂ ಮಾಡಬೇಕೋ ಅದನ್ನು ಮಾಡಿದ್ದೇವೆ. ಇದು ಹೊಸ ಯೋಜನೆ, ಹೊಸ ಭಾರತಕ್ಕೆ ಅನೂಕೂಲವಾಗುವ ಮಸೂದೆಯಾಗಿದೆ ಎಂದು ಹೇಳಿದರು.

ಎಲ್ಲಾ ಕೆಲಸದಲ್ಲಿಯೂ ಮಹಾತ್ಮ ಗಾಂಧಿ ಆದರ್ಶಗಳು ಇವೆ:
ಮಹಾತ್ಮ ಗಾಂಽ ಎಲ್ಲರ ಹೃದಯದಲ್ಲೂ ಸದಾ ಇರುವ ವ್ಯಕ್ತಿಯಾಗಿದ್ದಾರೆ. ಎಲ್ಲಾ ಕೆಲಸದಲ್ಲಿಯೂ ಅವರ ಆದರ್ಶಗಳು ಇವೆ ಎಂಬುದು ನಮ್ಮ ನಂಬಿಕೆಯಾಗಿದೆ. ಪಿಎಂ ಆವಾಸ್, ಜಲಜೀವವ್?ನಲ್ಲಿ ಅವರ ಆದರ್ಶಗಳಿವೆ. ಪಿಎಂ ಮುದ್ರಾ ಯೋಜನೆ ಸೇರಿ ಅನೇಕ ಯೋಜನೆಗಳಲ್ಲಿ ಅವರ ಆದರ್ಶಗಳಿವೆ. ವಿಕಸಿತ ಭಾರತದ ಗುರಿಯೇ ಗಾಂಽಯವರ ಆದರ್ಶದೊಂದಿಗೆ ನಡೆಯುತ್ತಿರುವುದಾಗಿದೆ ಎಂದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ನಿರಂತರವಾಗಿ ನಮ್ಮ ಬೇಡಿಕೆಯಿದೆ. ವಿಕಸಿತ ಭಾರತದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ನಿರಂತರ ಅಭಿವೃದ್ಧಿ ಕಾರ್ಯ ನಡೆಯುತ್ತಿವೆ. ಅದರಲ್ಲೂ ಕುಶಾಲನಗರ ಹೆದ್ದಾರಿ ಮಾಡಲೂ ಏನೆಲ್ಲಾ ಅನುಮತಿ ಬೇಕೋ ಎಲ್ಲವನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:-ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಮಾರ್ಚ್ ೨೦೨೭ರೊಳಗೆ ರಸ್ತೆ ಪೂರ್ಣಗೊಳಿಸಲಿದ್ದೇವೆ. ಒಂದೆರಡು ವಾರಗಳಲ್ಲಿ ಕೇಂದ್ರಕ್ಕೆ ಭೂಮಿ ಹಸ್ತಾಂತರ ಪ್ರಕ್ರಿಯೆಯೂ ಪೂರ್ಣಗೊಳ್ಳುವ ಮೂಲಕ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಕಾರ್ಯ ಚುರುಕಾಗಲಿದೆ. ಭಾರತೀಯ ಭಾಷಾ ಸಂಸ್ಥಾನ (ಸಿಐಐಎಲ್ )ನಲ್ಲಿರುವ ಕನ್ನಡ ಶಾಸ್ತ್ರೀಯ ಭಾಷಾ ಸಂಸ್ಥಾನವನ್ನು ಪ್ರತ್ಯೇಕಗೊಳಿಸಿ ಅಭಿವೃದ್ಧಿ ಮಾಡುವ ಬಗ್ಗೆಯೂ ಕ್ರಮವಹಿಸಲಾಗಿದೆ ಎಂದರು.

ಮೈಸೂರಿನಲ್ಲಿಯೂ ಇಕೋ ಟೂರಿಸಂ ಜೋನ್ ಅಡಿ ಮೃಗಾಲಯದ ಸಮೀಪದ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ತಂದಿದ್ದೇವೆ. ಟಾಂಗಾ ಮೂಲಕ ಮೈಸೂರನ್ನು ನೋಡುವುದು ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ವಸ್ತು ಸಂಗ್ರಹಾಲಯ ಮಾಡುವುದಕ್ಕೂ ಮನವಿ ಮಾಡಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

11 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

12 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

12 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

17 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

18 hours ago